September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಫರಂಗಿಪೇಟೆಯ ನಾಪತ್ತೆಯಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ

ಸುರಕ್ಷಿತವಾಗಿ ಕರೆತರುತ್ತಿರುವ ಪೊಲೀಸರು

ಮಂಗಳೂರು: ನಗರದ ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ಕೊನೆಗೂ ಪತ್ತೆಯಾಗಿದ್ದಾನೆ. ಫೆಬ್ರವರಿ 25ರಂದು ನಾಪತ್ತೆಯಾಗಿದ್ದ ದಿಗಂತ್ ಇದೀಗ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.

ಪಶ್ಚಿಮ ‌ವಲಯ ಐ.ಜಿ. ಅಮೀತ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ‌ಕನ್ನಡ ಜಿಲ್ಲಾ ಎಸ್ಪಿ ಯತೀಶ್‌ ನೇತೃತ್ವದಲ್ಲಿ ‌ಮತ್ತಷ್ಟು ತನಿಖೆ ತೀವ್ರಗೊಳಿಸಲಾಗಿತ್ತು. ಜಿಲ್ಲೆಯ ವಿವಿಧ ಠಾಣೆಗಳ ಸಬ್ ಇನ್ಸ್ ಪೆಕ್ಟರ್ ‌ಗಳು ಮತ್ತು ಜಿಲ್ಲೆಯ ವಿವಿಧ ಠಾಣೆಗಳ ಕ್ರೈಮ್ ವಿಭಾಗದಲ್ಲಿ ಕರ್ತವ್ಯ ಮಾಡುತ್ತಿರುವ ಸಿಬ್ಬಂದಿಗಳು ತನಿಖೆ ಕಾರ್ಯ ನಡೆಸುತ್ತಿದ್ದರು.

ಇಂದು ಬೆಳಿಗ್ಗೆಯಿಂದ ದಿಗಂತ್ ಪತ್ತೆಗಾಗಿ ಕೂಬಿಂಗ್ ಕಾರ್ಯ ಕೊಡ ನಡೆದಿತ್ತು ಮತ್ತು ಸದನದಲ್ಲಿ ವಿಧಾನಸಭಾ ಅಧ್ಯಕ್ಷ ಸನ್ಮಾನ್ಯ ಯು.ಟಿ. ಖಾದರ್ ರವರು ಸ್ವತಃ ಪ್ರಸ್ತಾಪಿಸಿದ್ದರು. ಪತ್ತೆಗಾಗಿ ಏಳು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page