March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ಪಾಲ್ದಾನೆ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನಾಚರಣೆ

ಮಂಗಳೂರಿನ ಪಾಲ್ದಾನೆ ಸಂತ ತೆರೆಸಾ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಇಂದು ಮಾರ್ಚ್ 9 ರಂದು ಆದಿತ್ಯವಾರ ಆಚರಿಸಲಾಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳು ಮತ್ತು ಮಕ್ಕಳ ಪ್ರತಿನಿಧಿಯಾಗಿ ಬಾಲಕಿ ಇವಾ ಡಿಮೆಲ್ಲೊ ಹಾಗೂ ಬಾಲಕ ರೀವನ್ ಮೊಂತೇರೊ ದೀಪ ಬೆಳಗಿಸಿದರು. ಚರ್ಚ್ ನ ಧರ್ಮಗುರು ವಂದನೀಯ ಫಾದರ್ ಆಲ್ಬನ್ ಡಿಸೋಜಾರವರು ಮಕ್ಕಳಿಗೆ ಹಿತ ವಚನ ನುಡಿದರು.

ವೇದಿಕೆಯಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಆಯೋಗಗಳ ಸಂಯೋಜಕಿ ಜೋಸ್ಲಿನ್ ಲೋಬೊ ಉಪಸ್ಥಿತರಿದ್ದರು. ಶಿಕ್ಷಕರ ಸಂಚಾಲಕಿ ಲಿಝೀ ಫೆರ್ನಾಂಡಿಸ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರತಿ ತರಗತಿಯ ಕ್ರೈಸ್ತ ಶಿಕ್ಷಣ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಬಹುಮಾನ ನೀಡಿ ಗೌರವಿಸಲಾಯಿತು. ಶಿಕ್ಷಕರು ಮತ್ತು ಶಿಕ್ಷಕಿಯರನ್ನು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಮಕ್ಕಳಿಂದ ವಿವಿಧ ವಿನೋದಾವಳಿ ಮತ್ತು ಕಿರು ನಾಟಕವನ್ನು ಆಯೋಜಿಸಲಾಗಿತ್ತು. ಶಿಕ್ಷಕಿ ರೆನಿಟಾ ಟೆಲ್ಲಿಸ್ ವಂದಿಸಿದರು. ಫ್ಲೋರಾ ಡಿಕುನ್ಹಾ ನಿರೂಪಿಸಿದರು. ನೆರೆದ ಎಲ್ಲರಿಗೂ ಭೋಜನ ವ್ಯವಸ್ಥೆ ಏರ್ಪಡಿಸಲಾಗಿತ್ತು.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page