May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ತಮ್ಮ ಖಾಸಗಿ ವಾಹನಗಳ ಮೇಲೆ ‘ಪೊಲೀಸ್’ ಎಂದು ಬರೆಸುವಂತಿಲ್ಲ- ಗೃಹ ಸಚಿವ ಡಾ.‌ಜಿ. ಪರಮೇಶ್ವರ್

ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಖಾಸಗಿ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೆ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ. ಪರಮೇಶ್ವರ್ ರವರು ವಿಧಾನ ಸಭೆಯಲ್ಲಿ ಸ್ಪಷ್ಟ ಸೂಚನೆ ನೀಡಿದ್ದಾರೆ.

ಶ್ರವಣ ಬೆಳಗೊಳದ ಶಾಸಕ ಬಾಲಕೃಷ್ಣ ಸಿ.ಎನ್. ಅವರ ಪ್ರಶ್ನೆಗೆ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಉತ್ತರ ನೀಡಿದ್ದಾರೆ. ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಖಾಸಗಿ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಅವರು ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಕೆಲ ಪೊಲೀಸ್ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಇವರ ವಿರುದ್ಧ ಸರ್ಕಾರವು ತೆಗೆದುಕೊಂಡಿರುವ ಕ್ರಮಗೇಳನು? ಎಂದು ಪ್ರಶ್ನಿಸಿದ್ದಾರೆ.

ಅದಕ್ಕೆ ಗೃಹ ಸಚಿವರು ಉತ್ತರಿಸಿ ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ‌ತಮ್ಮ ಖಾಸಗಿ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ, ತಮ್ಮ ಖಾಸಗಿ ವಾಹನಗಳ ಮೇಲೆ ಪೊಲೀಸ್ ಎಂದು ಬರೆಯಿಸಿಕೊಂಡಿರುವುದು ಗೃಹ ಇಲಾಖೆಯ ಗಮನಕ್ಕೆ ಬಂದಿದೆ. ಖಾಸಗಿ ವಾಹನಗಳ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್ ಎಂದು ಬರೆಸಿದ್ದರೆ, ಅವರ ವಿರುದ್ಧ 2022 ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page