April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಜೆಸ್ಲಿಟಾ ಸೆರಾವೊ ಆತ್ಮಹತ್ಯೆ

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ಮನೆಯೊಂದರಲ್ಲಿ ವಿದ್ಯಾರ್ಥಿನಿಯ ಶವ ನೇಣು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ದಾಮಸ್ ಕಟ್ಟೆ ನಿವಾಸಿ 21 ವರ್ಷ ಪ್ರಾಯದ ಜೆಸ್ಲಿಟಾ ಸೆರಾವೊ ಎಂದು ಗುರುತಿಸಲಾಗಿದೆ.

ಮೃತ ಜೆಸ್ಲಿಟಾ ಸೆರಾವೊ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಪದವಿ ಶಿಕ್ಷಣ ಮಾಡಿಕೊಂಡಿದ್ದು, ಮಂಗಳವಾರ ಕಾಲೇಜಿಗೆ ರಜೆ ಮಾಡಿ ಮನೆಯಲ್ಲಿದ್ದಳು. ಬೆಳಗಿನ ಜಾವ ಹೆತ್ತವರು ಚರ್ಚ್ ಗೆ ಪ್ರಾರ್ಥನೆಗೆ ಹೋದ ಸಮಯದಲ್ಲಿ ಈಕೆ ತನ್ನ ಕೋಣೆಯಲ್ಲಿದ್ದ ಫ್ಯಾನ್ ಗೆ ಚೂಡಿದಾರ್ ಶಾಲ್ ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮನೆಯವರು ಚರ್ಚ್ ನಿಂದ ವಾಪಾಸ್ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ತಿಳಿದು ಬಂದಿದೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸನ್ನು ದಾಖಲಿಸಿ ಕೊಂಡಿದ್ದಾರೆ.  ಮೃತಳು ತಂದೆ ತಾಯಿ ಮತ್ತು ಅಣ್ಣನನ್ನು ಅಗಲಿದ್ದಾಳೆ.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page