September 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೊಲೀಸ್ ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದು ಹಣ ಸ್ವೀಕರಿಸಿದ 6 ಮಂದಿ ಪೊಲೀಸರ ವರ್ಗಾವಣೆ

ಸಮವಸ್ತ್ರದಲ್ಲೇ ಪೊಲೀಸರು ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಸಮವಸ್ತ್ರದಲ್ಲಿ ಪೊಲೀಸರು ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ ಹಣ ಕೂಡ ಪಡೆದಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಟೀಕೆ ವ್ಯಕ್ತವಾಗಿತ್ತು. ಇದೀಗ ಅವರ ಮೇಲೆ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದ್ದು ಆರು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ಆರು ಪೊಲೀಸರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್​ಪಿ ಅಮರನಾಥ ರೆಡ್ಡಿ ತಿಳಿಸಿದ್ದಾರೆ.

ಬಾದಾಮಿಯಿಂದ ವಿವಿಧ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಎಎಸ್​​ಐ ಡಿಜೆ ಶಿವಪುರ, ಎಎಸ್​​ಐ ಜಿಬಿ ದಳವಾಯಿ, ನಾಗರಾಜ ಅಂಕೋಲೆ, ಜಿಬಿ ಅಂಗಡಿ, ರಮೇಶ್ ಈಳಗೇರ, ರಮೇಶ್ ಹುಲ್ಲೂರು ವರ್ಗಾವಣೆಗೊಂಡ ಪೊಲೀಸರಾಗಿದ್ದಾರೆ.

You may also like

News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ
News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ,

You cannot copy content of this page