July 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೊಲೀಸ್ ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದು ಹಣ ಸ್ವೀಕರಿಸಿದ 6 ಮಂದಿ ಪೊಲೀಸರ ವರ್ಗಾವಣೆ

ಸಮವಸ್ತ್ರದಲ್ಲೇ ಪೊಲೀಸರು ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಸಮವಸ್ತ್ರದಲ್ಲಿ ಪೊಲೀಸರು ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ ಹಣ ಕೂಡ ಪಡೆದಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಟೀಕೆ ವ್ಯಕ್ತವಾಗಿತ್ತು. ಇದೀಗ ಅವರ ಮೇಲೆ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದ್ದು ಆರು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ಆರು ಪೊಲೀಸರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್​ಪಿ ಅಮರನಾಥ ರೆಡ್ಡಿ ತಿಳಿಸಿದ್ದಾರೆ.

ಬಾದಾಮಿಯಿಂದ ವಿವಿಧ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಎಎಸ್​​ಐ ಡಿಜೆ ಶಿವಪುರ, ಎಎಸ್​​ಐ ಜಿಬಿ ದಳವಾಯಿ, ನಾಗರಾಜ ಅಂಕೋಲೆ, ಜಿಬಿ ಅಂಗಡಿ, ರಮೇಶ್ ಈಳಗೇರ, ರಮೇಶ್ ಹುಲ್ಲೂರು ವರ್ಗಾವಣೆಗೊಂಡ ಪೊಲೀಸರಾಗಿದ್ದಾರೆ.

You may also like

News

Father Muller Homoeopathic Medical College Hosts Dr M.L. Dhawale Memorial Seminar 2026

The Department of Practice of Medicine, Father Muller Homoeopathic Medical College & Hospital, Deralakatte, Mangalore, organised the Dr M.L. Dhawale
News

ರೊಜಾರಿಯೊ ಕ್ಯಾಥೆಡ್ರಲ್‌ನಲ್ಲಿ ಹೃದಯ ಆರೋಗ್ಯ ಜಾಗೃತಿ ಹಾಗೂ ಸಿಪಿಆರ್ ತರಬೇತಿ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ರೊಜಾರಿಯೊ ಕ್ಯಾಥೆಡ್ರಲ್‌ನ ಆರೋಗ್ಯ ಆಯೋಗವು ಚರ್ಚ್ ಪಾಲನಾ ಸಮಿತಿಯ 21 ಆಯೋಗಗಳ ಸಹಯೋಗದಲ್ಲಿ “A Healthy Heart for a Blessed Life”

You cannot copy content of this page