April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೊಲೀಸ್ ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದು ಹಣ ಸ್ವೀಕರಿಸಿದ 6 ಮಂದಿ ಪೊಲೀಸರ ವರ್ಗಾವಣೆ

ಸಮವಸ್ತ್ರದಲ್ಲೇ ಪೊಲೀಸರು ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಸಮವಸ್ತ್ರದಲ್ಲಿ ಪೊಲೀಸರು ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ ಹಣ ಕೂಡ ಪಡೆದಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಟೀಕೆ ವ್ಯಕ್ತವಾಗಿತ್ತು. ಇದೀಗ ಅವರ ಮೇಲೆ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದ್ದು ಆರು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ಆರು ಪೊಲೀಸರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್​ಪಿ ಅಮರನಾಥ ರೆಡ್ಡಿ ತಿಳಿಸಿದ್ದಾರೆ.

ಬಾದಾಮಿಯಿಂದ ವಿವಿಧ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಎಎಸ್​​ಐ ಡಿಜೆ ಶಿವಪುರ, ಎಎಸ್​​ಐ ಜಿಬಿ ದಳವಾಯಿ, ನಾಗರಾಜ ಅಂಕೋಲೆ, ಜಿಬಿ ಅಂಗಡಿ, ರಮೇಶ್ ಈಳಗೇರ, ರಮೇಶ್ ಹುಲ್ಲೂರು ವರ್ಗಾವಣೆಗೊಂಡ ಪೊಲೀಸರಾಗಿದ್ದಾರೆ.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page