September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬ್ಯಾಂಕ್ ಆಫ್ ಬರೋಡದ ಮ್ಯಾನೇಜರ್‌ನಿಂದಲೇ ಬ್ಯಾಂಕ್‌ಗೆ ವಂಚನೆ – ಪ್ರಕರಣ ದಾಖಲು

ಮಂಗಳೂರು: ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ಗೆ ವಂಚಿಸಿದ ಬಗ್ಗೆ ಸೆನ್‌ ಠಾಣೆಯಲ್ಲಿ ನಿನ್ನೆ ಮಾರ್ಚ್ 16ರಂದು ಆದಿತ್ಯವಾರ ಪ್ರಕರಣ ದಾಖಲಾಗಿದೆ.

ಬ್ಯಾಂಕ್‌ ಆಫ್‌ ಬರೋಡಾದ ಕೊಣಾಜೆ ಶಾಖೆಯಲ್ಲಿ ಆರೋಪಿ ಮ್ಯಾನೆಜರ್ ಡೆರಿಕ್‌ ಅಜಿತ್‌ ಡಿಸೋಜ ಎಂಬಾತ 2022ರ ಸೆಪ್ಟಂಬರ್‌ 22ರಿಂದ 2024ರ ಫೆಬ್ರವರಿ 7ರ ತನಕ ಮ್ಯಾನೇಜರ್‌ ಆಗಿದ್ದು, ಈ ಸಂದರ್ಭ ಬ್ಯಾಂಕಿನ ಹಿರಿಯ ನಾಗರಿಕರು ಠೇವಣಿಯಲ್ಲಿರಿಸಿದ್ದ ಹಣವನ್ನು ಖಾತೆದಾರರಿಗೆ ತಿಳಿಯದಂತೆ 1,44,71,000 ರೂಪಾಯಿಯನ್ನು ಸಾಲ ರೂಪದಲ್ಲಿ ಇತರರ ಖಾತೆಗೆ ವರ್ಗಾಯಿಸಿದ್ದಾನೆ ಎನ್ನಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

 

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page