September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳು

ದಕ್ಷಿಣ ಕನ್ನಡ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲೆಯ 5 ರಿಂದ 16 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳ ಕಾರ್ಯಕ್ರಮವನ್ನು ಮಾರ್ಚ್ 25ರಂದು ಬೆಳಿಗ್ಗೆ 11 ಗಂಟೆಗೆ ನಗರದ ಉರ್ವಸ್ಟೋರ್ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.


ಹುಲಿ ಕುಣಿತ, ಸೃಜನಾತ್ಮಕ ಪ್ರದರ್ಶನ ಕಲೆ (ಭರತನಾಟ್ಯ, ಕರಾವಳಿಯ ಜಾನಪದ, ಯಕ್ಷ ನೃತ್ಯ), ವಾದ್ಯ ಸಂಗೀತ, ಸುಗಮ ಸಂಗೀತ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತ ಮಕ್ಕಳು ಮಾರ್ಚ್ 20 ರ ಒಳಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಒಂದು ಮಗುವಿಗೆ ಒಂದು ಸ್ಪರ್ಧೆಯಲ್ಲಿ ಭಾಗವಹಿಸಲು ಮಾತ್ರ ಅವಕಾಶ. ಪ್ರತೀ ಸ್ಪರ್ಧೆಯಲ್ಲಿ ಸ್ಪರ್ಧಾಳುಗಳಿಗೆ 3 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಹುಲಿ ಕುಣಿತ ಮತ್ತು ಸೃಜನಾತ್ಮಕ ಪ್ರದರ್ಶನ ಕಲೆ ಗುಂಪು ಸ್ಪರ್ಧೆಗಳಾಗಿರುತ್ತದೆ. ವಿಜೇತರಿಗೆ ಪ್ರಮಾಣ ಪತ್ರದ ಜೊತೆಗೆ ಸೂಕ್ತ ಬಹುಮಾನ ಹಾಗೂ ಭಾಗವಹಿಸುವ ಎಲ್ಲ ಮಕ್ಕಳಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಲಾಗುತ್ತದೆ.


ಹೆಚ್ಚಿನ ಮಾಹಿತಿಗೆ ಮಂಗಳೂರು ಬಿಜೈ ಮೆಸ್ಕಾಂ ಬಳಿ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರ ಕಚೇರಿ (ದೂರವಾಣಿ ಸಂಖ್ಯೆ : 8217296141) ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page