May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸ್ಟೋರ್ ನಲ್ಲಿ ಸಿಕ್ಕಿದ ಅಕ್ಕಿಯನ್ನು (ಆಹಾರಧಾನ್ಯ) ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು – ರಾಜ್ಯ ಸರ್ಕಾರ ಮಹತ್ವದ ಆದೇಶ

ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು. ಒಂದು ವೇಳೆ ನ್ಯಾಯಬೆಲೆ ಅಂಗಡಿಯವರು ಕಡಿಮೆ ಪ್ರಮಾಣ ವಿತರಿಸಿದಲ್ಲಿ ಉಚಿತ ದೂರವಾಣಿ ಸಂಖ್ಯೆ: 1967 ಅಥವಾ ತಹಶೀಲದಾರರ ಕಛೇರಿ ಅಥವಾ ಜಂಟಿ ನಿರ್ದೇಶಕರ ಕಛೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ (ಬಿಪಿಎಲ್) ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ (ಎನ್‍ಎಫ್‍ಎಸ್‍ಎ) ಯಡಿ ವಿತರಿಸಲಾಗುವ 5 ಕೆಜಿ ಆಹಾರಧಾನ್ಯದೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 5 ಕೆಜಿ ಆಹಾರಧಾನ್ಯದ ಬದಲಾಗಿ ಪ್ರತಿ ಕೆಜಿಗೆ ರೂಪಾಯಿ 34ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ರೂಪಾಯಿ 170ರಂತೆ ಹಣವನ್ನು ವರ್ಗಾಯಿಸಲಾಗಿರುತ್ತದೆ.

ಆದರೆ ಫೆಬ್ರವರಿ-2025 ನೇ ತಿಂಗಳಿನಿಂದ ಹಣದ ಬದಲಾಗಿ ಅಕ್ಕಿಯನ್ನೇ ನೀಡುವ ಕುರಿತು ಸರ್ಕಾರವು ತೀರ್ಮಾನಿಸಿ, ಆದೇಶವನ್ನು ಹೊರಡಿಸಿದೆ. ಫೆಬ್ರವರಿ-2025ನೇ ಮಾಹೆಗೆ ಸಂಬಂಧಿಸಿದ 5 ಕೆಜಿ ಅಕ್ಕಿಯನ್ನು ಮಾರ್ಚ್-2025 ನೇ ತಿಂಗಳ ಪಡಿತರ ವಿತರಣೆಯಲ್ಲಿ ಸೇರ್ಪಡೆಗೊಳಿಸಿ, ಆಯುಕ್ತರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ಇವರು ಹಂಚಿಕೆ ಮಾಡಿರುತ್ತಾರೆ.

ಫೆಬ್ರವರಿ-2025ನೇ ಮಾಹೆಯ ರಾಜ್ಯ ಸರ್ಕಾರದ 5 ಕೆಜಿ ಅಕ್ಕಿ ಹಾಗೂ ಮಾರ್ಚ್-2025ನೇ ಮಾಹೆಯ ರಾಜ್ಯ ಸರ್ಕಾರದ 5 ಕೆಜಿ ಅಕ್ಕಿ ಮತ್ತು ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 5 ಕೆಜಿ ಅಕ್ಕಿ ಒಟ್ಟು ಆದ್ಯತಾ ಪಡಿತರ ಚೀಟಿಗೆ ಮಾರ್ಚ್-2025ನೇ ಮಾಹೆಯಲ್ಲಿ ಪಡಿತರ ಚೀಟಿಯಲ್ಲಿರುವ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವದು. ಅಂತ್ಯೋದಯ ಪಡಿತರ ಚೀಟಿಯಲ್ಲಿರುವ ಒಬ್ಬ, ಇಬ್ಬರು ಮತ್ತು ಮೂರು ಜನ ಸದಸ್ಯರಿಗೆ 35 ಕೆಜಿ ಅಕ್ಕಿ, ನಾಲ್ಕು ಜನ ಸದಸ್ಯರಿದ್ದರೆ 45 ಕೆಜಿ ಅಕ್ಕಿ, ಐದು ಜನ ಸದಸ್ಯರಿದ್ದರೆ 65 ಕೆಜಿ ಅಕ್ಕಿ, ಆರು ಜನ ಸದಸ್ಯರಿದ್ದರೆ 85 ಕೆಜಿ ಅಕ್ಕಿ, 7 ಜನ ಸದಸ್ಯರಿದ್ದರೆ 105 ಕೆಜಿ ಅಕ್ಕಿ ಹಾಗೂ 10 ಕ್ಕಿಂತ ಮೇಲ್ಪಟ್ಟು ಸದಸ್ಯರು ಇದ್ದಲ್ಲಿ ಇದೇ ಅನುಪಾತ ಮುಂದುವರೆಸಿ ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page