May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮ, ಜಾತಿಗಳಿಗಿಂತ ಮೊದಲು ಜೀವ ಉಳಿಸುವ ಬೆಲೆಯನ್ನು ತಿಳಿಯಬೇಕು – ರೇಮಂಡ್ ಡಿಕೂನಾ ತಾಕೊಡೆ

ನಮ್ಮ ಮನೆಯನ್ನು ಸ್ವಚ್ಛ ಇಡಲು ಸುತ್ತಲೂ ಆವರಣದ ಗೋಡೆ ಕಟ್ಟುವ ನಾವು ನೀರು, ಗಾಳಿ, ಮಣ್ಣು ಎಲ್ಲಾ ಜನರು ಹಂಚಿಕೊಂಡು ಬದುಕುವ ಸತ್ಯವನ್ನು ನೆನಪಿಡಬೇಕು. ನನ್ನ ಧರ್ಮ, ನಮ್ಮ ಜಾತಿಗಳು ಶ್ರೇಷ್ಠ ಮಾಡುವಾಗ ಇತರ ಜಾತಿಧರ್ಮವನ್ನು ಗೌರವದಿಂದ ನೋಡಲು ಕಲಿಯಬೇಕು. ಜಾತಿಧರ್ಮಗಳಿಗಿಂತ ಜೀವ ಒಂದು ಬದುಕಿಸುವುದು ಶ್ರೇಷ್ಠ ಕಾರ್ಯ ಎಂದು ಝೋನ್ ಹದಿನೈದರ ಹಿರಿಯ ತರಭೇತುದಾರ ಜೇಸಿ ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಮೂಡುಬಿದಿರೆ ಜೈನ ಪ್ರೌಢಶಾಲಾ 125 ವಿಧ್ಯಾರ್ಥಿಗಳಿಗೆ ಜೀವನ ಮೌಲ್ಯಗಳ ತರಭೇತಿಯನ್ನು ನೀಡಿ ಮಾತನಾಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಶಾಮ್‌ಪ್ರಸಾದ್ ಕೆ. ತರಭೇತಿಯನ್ನು ಚಾಲನೆ ಮಾಡಿ ನಮ್ಮ ಸಂಸ್ಥೆಯ ನಲ್ವತ್ತು ವರ್ಷಗಳ ಹಳೆಯ ವಿದ್ಯಾರ್ಥಿ ಹಿರಿಯ ಪತ್ರಕರ್ತ, ಸಾಹಿತಿ ಆಗಿ ಸಾಧನೆ ಮಾಡಿ ಇಂದಿನ ವಿದ್ಯಾರ್ಥಿಗಳು ಅನುಸರಿಸುವ ರೀತಿಯಲ್ಲಿ ಬೆಳೆದ ಬಗ್ಗೆ ಹೆಮ್ಮೆ ಇದೆ ಎಂದರು.

ವಲಯ ತರಭೇತುದಾರರಾದ ಜೇಸಿ ನಿತೇಶ್ ಬಳ್ಳಾಳ್, ಜೇಸಿ ಅಜಿತ್ ಪ್ರಸಾದ್, ಜೇಸಿ ವಿನಯ ಚಂದ್ರ ತರಭೇತಿಯನ್ನು ಮುಂದುವರೆಸಿದರು. ಹಿರಿಯ ಶಿಕ್ಷಕ ವಿನಯಚಂದ್ರ ಸ್ವಾಗತಿಸಿದರು. ಶಿಕ್ಷಕಿ ವಿಜಯ ಪದ್ಮ ಸಹಕರಿದರು ಹಾಗೂ ಶಿಕ್ಷಕಿ ಮಾಧುರಿ ವಂದಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page