April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮ, ಜಾತಿಗಳಿಗಿಂತ ಮೊದಲು ಜೀವ ಉಳಿಸುವ ಬೆಲೆಯನ್ನು ತಿಳಿಯಬೇಕು – ರೇಮಂಡ್ ಡಿಕೂನಾ ತಾಕೊಡೆ

ನಮ್ಮ ಮನೆಯನ್ನು ಸ್ವಚ್ಛ ಇಡಲು ಸುತ್ತಲೂ ಆವರಣದ ಗೋಡೆ ಕಟ್ಟುವ ನಾವು ನೀರು, ಗಾಳಿ, ಮಣ್ಣು ಎಲ್ಲಾ ಜನರು ಹಂಚಿಕೊಂಡು ಬದುಕುವ ಸತ್ಯವನ್ನು ನೆನಪಿಡಬೇಕು. ನನ್ನ ಧರ್ಮ, ನಮ್ಮ ಜಾತಿಗಳು ಶ್ರೇಷ್ಠ ಮಾಡುವಾಗ ಇತರ ಜಾತಿಧರ್ಮವನ್ನು ಗೌರವದಿಂದ ನೋಡಲು ಕಲಿಯಬೇಕು. ಜಾತಿಧರ್ಮಗಳಿಗಿಂತ ಜೀವ ಒಂದು ಬದುಕಿಸುವುದು ಶ್ರೇಷ್ಠ ಕಾರ್ಯ ಎಂದು ಝೋನ್ ಹದಿನೈದರ ಹಿರಿಯ ತರಭೇತುದಾರ ಜೇಸಿ ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಮೂಡುಬಿದಿರೆ ಜೈನ ಪ್ರೌಢಶಾಲಾ 125 ವಿಧ್ಯಾರ್ಥಿಗಳಿಗೆ ಜೀವನ ಮೌಲ್ಯಗಳ ತರಭೇತಿಯನ್ನು ನೀಡಿ ಮಾತನಾಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಶಾಮ್‌ಪ್ರಸಾದ್ ಕೆ. ತರಭೇತಿಯನ್ನು ಚಾಲನೆ ಮಾಡಿ ನಮ್ಮ ಸಂಸ್ಥೆಯ ನಲ್ವತ್ತು ವರ್ಷಗಳ ಹಳೆಯ ವಿದ್ಯಾರ್ಥಿ ಹಿರಿಯ ಪತ್ರಕರ್ತ, ಸಾಹಿತಿ ಆಗಿ ಸಾಧನೆ ಮಾಡಿ ಇಂದಿನ ವಿದ್ಯಾರ್ಥಿಗಳು ಅನುಸರಿಸುವ ರೀತಿಯಲ್ಲಿ ಬೆಳೆದ ಬಗ್ಗೆ ಹೆಮ್ಮೆ ಇದೆ ಎಂದರು.

ವಲಯ ತರಭೇತುದಾರರಾದ ಜೇಸಿ ನಿತೇಶ್ ಬಳ್ಳಾಳ್, ಜೇಸಿ ಅಜಿತ್ ಪ್ರಸಾದ್, ಜೇಸಿ ವಿನಯ ಚಂದ್ರ ತರಭೇತಿಯನ್ನು ಮುಂದುವರೆಸಿದರು. ಹಿರಿಯ ಶಿಕ್ಷಕ ವಿನಯಚಂದ್ರ ಸ್ವಾಗತಿಸಿದರು. ಶಿಕ್ಷಕಿ ವಿಜಯ ಪದ್ಮ ಸಹಕರಿದರು ಹಾಗೂ ಶಿಕ್ಷಕಿ ಮಾಧುರಿ ವಂದಿಸಿದರು.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page