December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಮಿಷನರೇಟ್ ವ್ಯಾಪ್ತಿಯ ಹೋಂಸ್ಟೇ ರೆಸಾರ್ಟ್ ಗಳಿಗೆ ಕಡ್ಡಾಯ ನೋಂದಣಿ – ಪೊಲೀಸ್ ಆಯುಕ್ತರು

ದಕ್ಷಿಣ ಕನ್ನಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪ್ರವಾಸಿ ತಾಣಗಳಲ್ಲಿ ನಡೆಸಲಾಗುತ್ತಿರುವ ರೆಸಾರ್ಟ್ ಹೋಂ ಸ್ಟೇಗಳಲ್ಲಿ ಬರುವ ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಯ ಕ್ರಮಗಳ ಬಗ್ಗೆ ಮಂಗಳೂರಿನಲ್ಲಿ ಇಂದು ಮಾರ್ಚ್ 19ರಂದು ಬುಧವಾರ ಸಭೆಯನ್ನು ನಡೆಸಲಾಗಿದೆ.

ಕಾನೂನುಬಾಹಿರ ಚಟುವಟಿಕೆ ಹಾಗೂ ಆಹಿತಕರ ಘಟನೆಗಳು ನಡೆಯದಂತೆ, ಎಲ್ಲಾ ಹೋಂ ಸ್ಟೇ ಹಾಗೂ ರೆಸಾರ್ಟ್ ಮಾಲೀಕರು ಕಡ್ಡಾಯವಾಗಿ ನೋಂದಣಿಯನ್ನು ಮಾಡಿಸಲೇಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲೈ  ಮುಗಿಲನ್ ಅವರು ತಿಳಿಸಿದರು.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ, ರೆಸಾರ್ಟ್ ಹಾಗೂ ಹೋಂ ಸ್ಟೇಗಳಲ್ಲಿ ಕಡ್ಡಾಯವಾಗಿ ಸರಕಾರ ನೀಡಿದ ಮಾರ್ಗಸೂಚಿಗಳನ್ನು ಡಿಜಿ ಮತ್ತು ಐಜಿಪಿ ರವರ ಪತ್ರ ಸಂಖ್ಯೆ: ಕಾ ಮತ್ತು ಸು (7)/19/2025 ದಿನಾಂಕ:08.03.2025ರ ಉಲ್ಲೇಖದಂತೆ, ಪಾಲಿಸಬೇಕು ಎಂಬುದರ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲಾಯಿತು.

ಸಭೆಯಲ್ಲಿ ಅನುಪಮ್‌ ಅಗರ್ ವಾಲ್‌ ಐಪಿಎಸ್‌, ಪೊಲೀಸ್‌ ಆಯುಕ್ತರು ಮಂಗಳೂರು ನಗರ ಇವರ ನೇತೃತ್ವದಲ್ಲಿ, ಮುಲೈ ಮುಗಿಲನ್‌ ಐಎಎಸ್‌, ಜಿಲ್ಲಾಧಿಕಾರಿ ಇವರ ಸಹಯೋಗದಲ್ಲಿ ಸಭೆಯನ್ನು ನಡೆಸಲಾಯಿತು.

ಸುಮಾರು 118 ರೇಸಾರ್ಟ್/ಹೋಮ್ ಸ್ಟೇ ಮಾಲೀಕರು ಹಾಜರಿದ್ದರು. ಈ ಸಭೆಯಲ್ಲಿ ಅಬಕಾರಿ ಹಾಗೂ ಪ್ರವಾಸೋದ್ಯಮ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ಭಾಗವಹಿಸಿದ್ದರು.

You may also like

News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ
News

ಲೋಕಸಭೆಯಲ್ಲಿ ಮಾಜಿ ಸೈನಿಕರ ಪರ ಧ್ವನಿಯೆತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ

ಯೋಧರ ಚಿಕಿತ್ಸಾ ತೊಂದರೆ ಗಂಭೀರ – ಖಾಸಗಿ ಆಸ್ಪತ್ರೆಗಳು ಹಿಂದೆ ಸರಿಯುತ್ತಿರುವುದೇ ಆತಂಕ ಕೊಡಗಿನಲ್ಲಿ ECHS ಆಸ್ಪತ್ರೆಗಳ ಕೊರತೆ – ನಿವೃತ್ತ ಯೋಧರು 100–150 ಕಿ.ಮೀ ಪ್ರಯಾಣಿಸುವ

You cannot copy content of this page