July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ – ಪೊಲೀಸ್‌ ಕಮಿಷನರ್‌

ಮಂಗಳೂರು: ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್‌ ಕಮಿಷನರ್‌ ಅನುಪಮ್‌ ಆಗರ್ವಾಲ್ ಸೂಚಿಸಿದ್ದಾರೆ.

ಪತ್ರಕರ್ತರ ನಕಲಿ ಐ.ಡಿ. ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕರ್ ದುರ್ಬಳಕೆಗೆ ಕಡಿವಾಣ ಹಾಕುವಂತೆ ಹಾಗೂ ಕರ್ತವ್ಯ ನಿರ್ವಹಿಸುವ ಸಂದರ್ಭ ಪತ್ರಕರ್ತರಿಗೆ ಭದ್ರತೆ ಖಾತ್ರಿ ಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ  ಸಂಘದ ಮನವಿಗೆ ಸ್ಪಂದಿಸಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಮಾಧ್ಯಮ ಐಡಿ ಕಾರ್ಡ್ ದುರ್ಬಳಕೆ ಪ್ರಕರಣಗಳು ಕಂಡು ಬರುತ್ತಿವೆ. ಗುರುವಾರ ರಾತ್ರಿ ಕೊಡಿಯಾಲ್ ಬೈಲ್ ಬಳಿ ನಡೆದ ಸರಣಿ ಅಪಘಾತದಲ್ಲಿ ಕಾರು ಒಂದರಲ್ಲಿ ಮಾಧ್ಯಮ ಹೆಸರು ದುರ್ಬಳಕೆ ಮಾಡಿ ಸ್ಥಳದಲ್ಲಿ ನಕಲಿ ಐ.ಡಿ. ಕಾರ್ಡ್ ಪತ್ತೆಯಾಗಿದೆ. ಮಾಧ್ಯಮ ಕಾರ್ಡ್ ಗಳ ದುರ್ಬಳಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹಲವಾರು ವಾಹನಗಳಲ್ಲಿ ಮೀಡಿಯಾ ಹಾಗೂ ಪ್ರೆಸ್ ಸ್ಟಿಕರ್ ಬಳಕೆ ಕಂಡು ಬರುತ್ತಿದೆ. ಇಂತಹ ಮಾಧ್ಯಮ ಸ್ಟಿಕರ್ ಬಳಕೆ ಮಾಡಿ ಕಾನೂನು ಬಾಹಿರ ಕೃತ್ಯಗಳು ನಡೆಯುವ ಸಾಧ್ಯತೆ ಇದೆ. ಇಂತಹ ವಾಹನಗಳ ತಪಾಸಣೆ ನಡೆಸಬೇಕು. ಪತ್ರಕರ್ತರು ನಿರ್ಭೀತಿಯಿಂದ, ಸುಲಲಿತವಾಗಿ ಕರ್ತವ್ಯ ನಿರ್ವಹಿಸಲು ಭದ್ರತೆ ಖಾತ್ರಿಪಡಿಸಬೇಕು ಎಂದು ಸಂಘ ಮನವಿ ಮಾಡಿತ್ತು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್‌ ರೈ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪ್ರೆಸ್‌ ಕ್ಲಬ್‌ ಉಪಾಧ್ಯಕ್ಷ ಮುಹಮ್ಮದ್‌ ಆರೀಫ್‌ ಪಡುಬಿದ್ರಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಖಪಾಲ್‌ ಪೊಳಲಿ, ರಾಜೇಶ್‌ ದಡ್ಡಂಗಡಿ, ಸದಸ್ಯರಾದ ಪ್ರಸನ್ನ ಪೂಜಾರಿ, ಶಶಿಕಾಂತ್‌ ಜೆ.,  ಸಂದೀಪ್‌ ಕುಮಾರ್‌ ಇದ್ದರು.

 

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page