December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಸಂಗತ ವಿಡಿಯೋ – ಪೊಲೀಸರ ಸ್ಪಷ್ಟೀಕರಣ

ಕಳೆದ ವರ್ಷ 2024 ಡಿಸೆಂಬರ್ 23ರಂದು ಕುದುರೆಮುಖ ಜಂಕ್ಷನ್ ನಲ್ಲಿ ನಡೆದ ಒಂದು ಘಟನೆಯ ವಿಡಿಯೋ ಒಂದನ್ನು ಅಪರಿಚಿತರು ಚಿತ್ರೀಕರಿಸಿ ಅದಕ್ಕೆ ಕೂಳೂರು ಸೇತುವೆ ಬಳಿ ದರ್ಪ ಮೆರೆದ ಪೊಲೀಸರು ಎಂಬ ಒಕ್ಕಣೆಯೊಂದಿಗೆ ಇಂದು ಮಾರ್ಚ್ 21ರಂದು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವುದು, ‘ಸತ್ಯಕ್ಕೆ ದೂರವಾದುದು’ ಎಂದು ಮಂಗಳೂರು ಪೊಲೀಸರಿಂದ ಸ್ಪಷ್ಟೀಕರಣ ದೊರಕಿದೆ.

ಕುದುರೆಮುಖ ಜಂಕ್ಷನ್ ನಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ವಾಹನ ಸಂಚಾರಕ್ಕೆ ಅಡಚಣೆಯನ್ನು ಉಂಟುಮಾಡುತ್ತಿದ್ದು, ಪೊಲೀಸರು ಸಾರ್ವಜನಿಕರ ಸಹಾಯದೊಂದಿಗೆ ಸದರಿ ವ್ಯಕ್ತಿಯನ್ನು ರಸ್ತೆ ಬದಿಗೆ ಕಳುಹಿಸಿದ್ದರು. ಸದ್ರಿ ವ್ಯಕ್ತಿ ತೀರಾ ಕುಡಿದಿದ್ದರಿಂದ ಮಾನಸಿಕ ಸ್ತಿಮಿತವಿಲ್ಲದಂತೆ ಪದೇ ಪದೇ ರಸ್ತೆಗೆ ಬಂದು ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದು ಆತನಿಗೆ ಮೂಗಿನಲ್ಲಿ ರಕ್ತ ಬಂದಿತ್ತು.

ಸಾರ್ವಜನಿಕರ ಸಹಾಯದಿಂದ ಪೊಲೀಸರು ಆ ವ್ಯಕ್ತಿಯನ್ನು ಮೇಲಕ್ಕೆತ್ತಿ, ಉಪಚರಿಸಿ, ಆಸ್ಪತ್ರೆಗೆ ಸಾಗಿಸಲು ವಾಹನದ ಬಳಿ ಕರೆದುಕೊಂಡು ಬರುತ್ತಿರುವಾಗ ಸಾರ್ವಜನಿಕರು ತಪ್ಪಾಗಿ ತಿಳಿದುಕೊಂಡು ಈ ರೀತಿಯ ವಿಡಿಯೋ ವೈರಲ್ ಮಾಡಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

You may also like

News

ತುಳುನಾಡಿನ ದೈವಾರಾಧನೆ ಸಮುದಾಯಗಳ ಸಂಕಷ್ಟ ನಿವಾರಿಸಲು ಸರ್ಕಾರ ಕ್ರಮ ಕೈಗೊಳ್ಳಲಿ – ಶಾಸಕ ವೇದವ್ಯಾಸ ಕಾಮತ್ ಆಗ್ರಹ

ತುಳುನಾಡಿನ ದೈವಾರಾಧನೆಗೆ ಸಂಬಂಧಿಸಿದ ಅನೇಕ ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವುದರಿಂದ ತಕ್ಷಣವೇ ಸರ್ಕಾರ ನೆರವಿಗೆ ಬರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ
News

ಇಂದಿನಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮಣಿಪುರಕ್ಕೆ ಎರಡು ದಿನಗಳ ಭೇಟಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಡಿಸೆಂಬರ್ 11ರಿಂದ ಗುರುವಾರ ಮಣಿಪುರಕ್ಕೆ ಎರಡು ದಿನಗಳ ಭೇಟಿಯನ್ನು ಆರಂಭಿಸಲಿದ್ದಾರೆ. ಭೇಟಿಯ ವೇಳೆ ಅವರು ಇಂಫಾಲದಲ್ಲಿ ನಡೆಯುವ 86ನೇ ನೂಪಿಲಾಲ್

You cannot copy content of this page