April 20, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಸಂಗತ ವಿಡಿಯೋ – ಪೊಲೀಸರ ಸ್ಪಷ್ಟೀಕರಣ

ಕಳೆದ ವರ್ಷ 2024 ಡಿಸೆಂಬರ್ 23ರಂದು ಕುದುರೆಮುಖ ಜಂಕ್ಷನ್ ನಲ್ಲಿ ನಡೆದ ಒಂದು ಘಟನೆಯ ವಿಡಿಯೋ ಒಂದನ್ನು ಅಪರಿಚಿತರು ಚಿತ್ರೀಕರಿಸಿ ಅದಕ್ಕೆ ಕೂಳೂರು ಸೇತುವೆ ಬಳಿ ದರ್ಪ ಮೆರೆದ ಪೊಲೀಸರು ಎಂಬ ಒಕ್ಕಣೆಯೊಂದಿಗೆ ಇಂದು ಮಾರ್ಚ್ 21ರಂದು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವುದು, ‘ಸತ್ಯಕ್ಕೆ ದೂರವಾದುದು’ ಎಂದು ಮಂಗಳೂರು ಪೊಲೀಸರಿಂದ ಸ್ಪಷ್ಟೀಕರಣ ದೊರಕಿದೆ.

ಕುದುರೆಮುಖ ಜಂಕ್ಷನ್ ನಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ವಾಹನ ಸಂಚಾರಕ್ಕೆ ಅಡಚಣೆಯನ್ನು ಉಂಟುಮಾಡುತ್ತಿದ್ದು, ಪೊಲೀಸರು ಸಾರ್ವಜನಿಕರ ಸಹಾಯದೊಂದಿಗೆ ಸದರಿ ವ್ಯಕ್ತಿಯನ್ನು ರಸ್ತೆ ಬದಿಗೆ ಕಳುಹಿಸಿದ್ದರು. ಸದ್ರಿ ವ್ಯಕ್ತಿ ತೀರಾ ಕುಡಿದಿದ್ದರಿಂದ ಮಾನಸಿಕ ಸ್ತಿಮಿತವಿಲ್ಲದಂತೆ ಪದೇ ಪದೇ ರಸ್ತೆಗೆ ಬಂದು ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದು ಆತನಿಗೆ ಮೂಗಿನಲ್ಲಿ ರಕ್ತ ಬಂದಿತ್ತು.

ಸಾರ್ವಜನಿಕರ ಸಹಾಯದಿಂದ ಪೊಲೀಸರು ಆ ವ್ಯಕ್ತಿಯನ್ನು ಮೇಲಕ್ಕೆತ್ತಿ, ಉಪಚರಿಸಿ, ಆಸ್ಪತ್ರೆಗೆ ಸಾಗಿಸಲು ವಾಹನದ ಬಳಿ ಕರೆದುಕೊಂಡು ಬರುತ್ತಿರುವಾಗ ಸಾರ್ವಜನಿಕರು ತಪ್ಪಾಗಿ ತಿಳಿದುಕೊಂಡು ಈ ರೀತಿಯ ವಿಡಿಯೋ ವೈರಲ್ ಮಾಡಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

You may also like

News

ದಯೆಯಿಂದಲೇ ಪರಸ್ಪರ ಉನ್ನತಿಗೇರಲು ಭಕ್ತಾಧಿಗಳಿಗೆ ಕರೆ ನೀಡಿದ ಫಾದರ್ ನವೀನ್ ಪ್ರಕಾಶ್ ಡಿಸೋಜ

ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಈಸ್ಟರ್ ಹಬ್ಬ ಆಚರಣೆ ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾದರ್ ನವೀನ್ ಪ್ರಕಾಶ್ ಡಿಸೋಜ,
News

ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಶೃದ್ಧಾಭಕ್ತಿಯಿಂದ ಶುಭ ಶುಕ್ರವಾರ ಆಚರಣೆ

ಆಧುನಿಕ ಜೀವನದಲ್ಲಿ ನಾವು ಕ್ರಿಸ್ತನಿಗೆ ಯಾವ ರೀತಿಯ ಶಿಲುಬೆಯನ್ನು ನೀಡುತ್ತೇವೆ – ಫಾದರ್ ವಿಜಯ್ ಮಚಾದೊ ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಇಂದು ಎಪ್ರಿಲ್ 18ರಂದು

You cannot copy content of this page