April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೊಗರ್ನಾಡ್ ಚರ್ಚ್ ನ ‘ಹೊಸಾನ್ನ ವಲಯ’ದಲ್ಲಿ ಸಂಬ್ರಮದ ಮಹಿಳಾ ದಿನಾಚರಣೆ

ದೇವಮಾತ ಮೊಗರ್ನಾಡ್ ಚರ್ಚ್ ಸ್ಥಾಪನೆಯ 250 ವರ್ಷದ ಜುಬಿಲಿ ಆಚರಣೆ ಪ್ರಯುಕ್ತ ಮಾರ್ಚ್ ತಿಂಗಳಲ್ಲಿ 16 ವರ್ಷ ಮೇಲ್ಪಟ್ಟ ಕುವರಿಯರಿಗೆ ಹಾಗೂ ಮಹಿಳೆಯರಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಂತೆಯೇ ಚರ್ಚ್ ನ ಐದು ವಲಯಗಳಲ್ಲಿ ಒಂದಾದ ಹೊಸಾನ್ನ ವಲಯದ ನೇತೃತ್ವದಲ್ಲಿ ಮಾರ್ಚ್ 22 ರಂದು ಶನಿವಾರ ಸಂಜೆ ಮಹಿಳಾ ಸಮಾವೇಶ ಬಹಳ ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಚರ್ಚ್ ಪ್ರಧಾನ ಧರ್ಮ ಗುರುಗಳಾದ ವಂದನೀಯ ಫಾದರ್ ಅನಿಲ್ ಕೆನ್ಯೂಟ್ ಡಿಮೆಲ್ಲೊ ಮಾತನಾಡಿ “ಹೆಣ್ಣು ಹೀಗೆಯೇ ಎಂಬುದನ್ನು ಪದಗಳಿಂದಾಗಲಿ, ಕೃತಿಗಳಿಂದಾಗಲಿ ವರ್ಣಿಸಲು ಸಾಧ್ಯವಿಲ್ಲ. ಏಕೆಂದರೆ ಪ್ರಕೃತಿಯು ಅವಳೇ, ಸೃಷ್ಟಿಯು ಅವಳೇ. ಎಲ್ಲಾ ಕ್ಷೇತ್ರಗಳಲ್ಲಿ ಛಾಪನ್ನು ಮೂಡಿಸಿರುವ ಮಹಿಳೆಯರು ಕರ್ತವ್ಯದ ಆಗರ ಹಾಗೂ ತಾಳ್ಮೆ ಕರುಣೆಯ ಸಾಗರ” ಎಂದು ಪ್ರಶಂಶಿಸಿದರು.

ದೇವಮಾತ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ನವೀನ್ ಪ್ರಕಾಶ್ ಪಿಂಟೊ, ಡೀಕನ್ ವಂದನೀಯ ಮೆಲ್ವಿನ್ ಡಿಸೋಜಾ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂತೋಷ್ ಡಿಸೋಜ, ಕಾರ್ಯದರ್ಶಿ ವಿಲ್ಫ್ರೆಡ್ ಲೋಬೊ, 21 ಆಯೋಗಗಳ ಸಂಯೋಜಕಿ ಎಮಿಲಿಯಾನ ಡಿಕುನ್ಹಾ, ದೇವಮಾತ ಕಾನ್ವೆಂಟಿನ ಮುಖ್ಯ ಭಗಿನಿ ಆನ್ನಿ ಡಿಸೋಜಾ ಹಾಗೂ ಜುಬಿಲಿ ವರ್ಷದ ಕಾರ್ಯಕ್ರಮಗಳ ಸಂಯೋಜಕ ನವೀನ್ ಡಿಕುನ್ಹಾ ವೇದಿಕೆಯಲ್ಲಿ ಉಪಸ್ಥಿತದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬಂಟ್ವಾಳ ಸರಕಾರಿ ಆಸ್ಪತ್ರೆಯ ನರ್ಸಿಂಗ್ ಅಧಿಕಾರಿ ವಾಣಿ ಕೆ. ಮಹಿಳೆಯರ ದೈಹಿಕ, ಮಾನಸಿಕ ಒತ್ತಡ ಹಾಗೂ ಪೌಷ್ಟಿಕ ಆಹಾರ ಸೇವನೆಯ ಕುರಿತು ಮಾಹಿತಿಯನ್ನು ನೀಡಿದರು. ಸಾಧನೆ ಸೇವೆ ಮಾಡಿದ ವಲಯದ ಕೆಲವು ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಮನೋರಂಜನಾ ಕಾರ್ಯಕ್ರಮ ಹಾಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

ವಿಲಿಯಂ ಪಿರೇರಾ ಸಭಿಕರನ್ನು ಸ್ವಾಗತಿಸಿ, ರಾಜೇಶ್ ಡಿಸೋಜ ಧನ್ಯವಾದಗೈದರು. ಸಂತೋಷ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

 

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page