May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುಣಚ ಪರಿಯಾಲ್ತಡ್ಕದಲ್ಲಿ ಸೌಹಾರ್ದ ಇಫ್ತಾರ್ ಸಂಗಮ

ಪುಣಚ ಪಿರ್ಸತ್ತೆ ಚಂಗಾಯಿಮಾರ್ ಪುಣಚ ಪ್ರೀತಿಯ ಗೆಳೆಯರು ಇವರ ಆಶ್ರಯದಲ್ಲಿ ರಂಝಾನ್ ಪ್ರಯುಕ್ತ ಬೃಹತ್ ಸೌಹಾರ್ದ ಇಫ್ತಾ ಕೂಟ ಮಾರ್ಚ್ 29ರಂದು ಶನಿವಾರ ಪುಣಚ ಪರಿಯಾಲ್ತಡ್ಕ ಜಂಕ್ಷನ್ ನಲ್ಲಿ ನಡೆಯಿತು.

ಪ್ರಗತಿಪರ ಕೃಷಿಕ ಜಯಶ್ಯಾಂ ನೀರ್ಕಜೆ ಮಾತನಾಡಿ ಪುಣಚ ಗ್ರಾಮವು ಸೌಹಾರ್ದತೆಯ ಗ್ರಾಮವಾಗಿದೆ. ಇದೇ ಮಾದರಿಯಲ್ಲಿ ಶಾಂತಿ ಸೌಹಾರ್ದತೆ ಎಲ್ಲಡೆ ನೆಲೆಗೊಳ್ಳಲಿ ಎಂದು ಆಶಿಸಿದರು. ಪುಣಚ ಪರಿಯಾಲ್ತಡ್ಕ ಜಮ್ಮ ಮಸೀದಿ ಅಧ್ಯಕ್ಶ ಎಂ.ಎಸ್. ಮಹಮ್ಮದ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸೌಹಾರ್ದ ಇಫ್ತಾರ್ ಕೂಟದ ಬಗ್ಗೆ ವಿವರಿಸಿದರು.

ವೇದಿಕೆಯಲ್ಲಿ ಶ್ರೀಧರ್ ಶೆಟ್ಟಿ ದೇವಗುಂಡಿ, ಉದಯ ಕುಮಾರ್ ದಂಬೆ, ಶ್ರೀಧರ್ ಶೆಟ್ಟಿ ಬೈಲುಗುತ್ತು, ರವಿಕಿರಣ್ ಆಜೇರು, ರಾಜೇಂದ್ರ ರೈ ಬೈಲುಗುತ್ತು, ಮೌರೀಸ್ ಟೆಲ್ಲಿಸ್, ಜಗನ್ನಾಥ ಶೆಟ್ಟಿ ಕೋಡಂದ್ರು, ಯೂಸುಪ್ ಗೌಸಿಯಾ ಸಾಜ ಹಾಗೂ ಪುಣಚ ಮಸೀದಿ ಧರ್ಮಗುರುಗಳು ಉಪಸ್ಥಿತರಿದ್ದರು.

ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಪುಣಚ ಪರಿಸರದ ಹಾಗೂ ವಿವಿಧ ಕಡೆಗಳಿಂದ ಹಲವಾರು ಹಿಂದೂ, ಮುಸ್ಲಿಂ, ಕ್ರೈಸ್ತ ಸಮುದಾಯದ ಬಾಂಧವರು ಭಾಗವಹಿಸಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page