May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ದಲಿತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ

ಸಮಗ್ರ ತನಿಖೆಗೆ ಒತ್ತಾಯಿಸಿ ಆರೋಪಿ ಮಹೇಶ್ ಭಟ್ ಬಂಧನಕ್ಕೆ ಆಗ್ರಹಿಸಿ ಎಪ್ರಿಲ್ 3ರಂದು ವಿಟ್ಲ ನಾಡ ಕಚೇರಿ ಮುಂಭಾಗ ಪ್ರತಿಭಟನೆ

ವಿಟ್ಲದ ಮುರುವ ಪ್ರದೇಶದಲ್ಲಿ ಭೂಮಾಲ ಮಹೇಶ್ ಭಟ್ ಎಂಬಾತ ತನ್ನ ತೋಟದಲ್ಲಿ ದುಡಿಯುತ್ತಿದ್ದ ದಲಿತ ಕೂಲಿ ಕಾರ್ಮಿಕನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವು ಮಾಣಿಲ ಮುರುವ ಭಾಗದ ದಲಿತ ಸಮುದಾಯದೊಳಗೆ ಆಕ್ರೋಶವನ್ನು ಸೃಷ್ಟಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ವಾರ ಕಳೆದರೂ ಆರೋಪಿ ಮಹೇಶ್ ಭಟ್ ನ ಬಂಧಿಸಲು ಪೊಲೀಸ್ ಇಲಾಖೆಗೆ ಈವರೆಗೂ ಸಾಧ್ಯವಾಗಿಲ್ಲ. ದೌರ್ಜನ್ಯ ಎಸಗಿ ತಲೆಮರೆಸಿಕೊಂಡಿರುವ ಪ್ರಭಾವಿ ಭೂಮಾಲಕ ಮಹೇಶ್ ಭಟ್ ಬಂಧನದಿಂದ ತಪ್ಪಿಸಿಕೊಂಡು ಜಾಮೀನು ಪಡೆಯಲು ಸ್ಥಳೀಯ ಪೊಲೀಸರು ಸಹಕರಿಸುತ್ತಿದ್ದಾರೆ. ಆ ಮೂಲಕ ದಲಿತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂಬ ಬಲವಾದ ಆರೋಪಗಳು ಕೇಳಿ ಬರುತ್ತಿದೆ.

ಕೃತ್ಯ ಎಸಗಿರುವ ಆರೋಪಿ ಯಾವುದೇ ಕಾರಣಕ್ಕೂ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳುವ ಅವಕಾಶ ಮಾಡಿಕೊಡಬಾರದು. ಆದಷ್ಟು ಬೇಗ ಮಹೇಶ ಭಟ್ ನನ್ನು ಬಂಧಿಸಬೇಕು. ಅತ್ಯಾಚಾರದ ಶಂಕೆ ಇರುವುದರಿಂದ ವೈಜ್ಞಾನಿಕ ವಿಧಿಗಳ ಮೂಲಕ ಪ್ರಕರಣದ ಆಳವಾದ ತನಿಖೆ ನಡೆಸಬೇಕು. ಹಾಗೂ ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಹಲವು ಹಂತದ ಹೋರಾಟಗಳನ್ನು ನಡೆಸಲು ಮಾರ್ಚ್ 30ರಂದು ಆದಿತ್ಯವಾರ ಸಂಜೆ ಮುರುವ ಸರಕಾರಿ ಶಾಲಾ ಬಳಿಯಲ್ಲಿ ನಡೆದ ದಲಿತ ಹಕ್ಕುಗಳ ಸಮಿತಿ ಕರೆದ ಸಾರ್ವಜನಿಕ ಸಭೆಯಲ್ಲಿ ನಿರ್ಧರಿಸಲಾಯಿತು. ಇದರ ಭಾಗವಾಗಿ ಎಪ್ರಿಲ್ 3ರಂದು ಗುರುವಾರ ವಿಟ್ಲ ನಾಡ ಕಚೇರಿ ಮುಂಭಾಗ ಪ್ರತಿಭಟನಾ ಪ್ರದರ್ಶನ ನಡೆಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ದಲಿತ ಹಕ್ಕುಗಳ ಸಮಿತಿಯ ರಾಜ್ಯ ಮುಖಂಡರಾದ ಈಶ್ವರಿ ಪದ್ಮುಂಜ, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಾದ ಕೆ. ಯಾದವ ಶೆಟ್ಟಿ, ಡಿಎಚ್ಎಸ್ ಜಿಲ್ಲಾ ಮುಖಂಡರಾದ ಕೃಷ್ಣಪ್ಪ ಕೊಣಾಜೆ, ಕೃಷ್ಣ ತಣ್ಣೀರುಬಾವಿ, ರಾಧಕೃಷ್ಣ ಬೊಂಡಂತಿಲ, ಸುನೀತಾ, ಮುರುವ ಪ್ರದೇಶದ ಮುಖಂಡರಾದ ಪುಷ್ಪರಾಜ್, ವಿನಯ್, ಸುರೇಶ್ ಮುಂತಾದವರು ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page