April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ SP ಯತೀಶ್ ಎನ್. ಸಹಿತ ಜಿಲ್ಲೆಯ ಇತರ ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಪೋಲಿಸ್ ಕರ್ತವ್ಯದಲ್ಲಿ ಅಪರಿಮಿತ ಸಾಧನೆಗೈದಾಗ ಅವರಿಗೆ ನೀಡುವ ಮುಖ್ಯಮಂತ್ರಿ ಪದಕದ ಪಟ್ಟಿಯಲ್ಲಿ 2022, 2023 ಹಾಗೂ 2024ರ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪೊಲೀಸರಿಗೆ ಮುಖ್ಯಮಂತ್ರಿ ಪದಕವು ದಕ್ಕಿದೆ.

2022ರ ಪದಕವು ಕಠಿಣ ಪರಿಶ್ರಮ ನಿಸ್ವಾರ್ಥ ಸೇವೆ ಹಾಗೂ ಕರ್ತವ್ಯಕ್ಕೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸಿದ ಆಜಡ್ಕ ಪರಮೇಶ್ವರ ಗೌಡ ASI ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ; ಪದ್ಮಯ ರಾಣೆ ಪೊಲೀಸ್ ಇನ್ಸ್ ಪೆಕ್ಟರ್ ವೈಯರ್ ಲೆಸ್ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ; ನಾಗರಾಜ್ ಹೆಚ್.ಇ. ಪೊಲೀಸ್ ನಿರೀಕ್ಷಕರು ವಿಟ್ಲ ಪೊಲೀಸ್ ಠಾಣೆ ಹಾಗೂ ಎಸ್. ವಿಜಯ ಪ್ರಸಾದ್ ಪೊಲೀಸ್ ಉಪಾಧೀಕ್ಷಕರು ಬಂಟ್ವಾಳ ಉಪ ವಿಭಾಗ ಇವರಿಗೆ ದೊರಕಲಿರುವುದು.

2023ರ ಪದಕವು ಯತೀಶ್. ಎನ್. IPS ಪೊಲೀಸ್ ಅಧೀಕ್ಷಕರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಅದ್ರಾಮ. ಎನ್. ಮುಖ್ಯ ಪೇದೆ ಪುತ್ತೂರು ನಗರ ಠಾಣೆ ಇವರು ಪಡೆದು ಕೊಳ್ಳಲಿದ್ದಾರೆ. ಶಿವಕುಮಾರ ಬಿ., ಪೊಲೀಸ್ ಇನ್ಸ್ಪೆಕ್ಟರ್ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಪ್ರವೀಣ್ ಎಂ. ಹೆಡ್ ಕಾನ್ಸ್ಟೇಬಲ್ ಸೆನ್ ಪೊಲೀಸ್ ಠಾಣೆ, ದಕ್ಷಿಣ ಕನ್ನಡ ಜಿಲ್ಲೆ ಇವರಿಗೆ 2024ರ ಮುಖ್ಯಮಂತ್ರಿ ಪೊಲೀಸ್ ಪದಕವು ದಕ್ಕಲಿದೆ.

ಪೋಲಿಸ್ ಪದಕವು ಸಿಕ್ಕಿದ ಎಲ್ಲಾ ಪೊಲೀಸರು ಇನ್ನು ಮುಂದೆಯೂ ಕರ್ತವ್ಯದಲ್ಲಿ ಕಾರ್ಯತತ್ವರತೆ ತಂದು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು ನೀಡುವ ಮುಖ್ಯಮಂತ್ರಿ ಪದಕ ಪ್ರಧಾನ ಕಾರ್ಯಕ್ರಮವು, ನಾಳೆ ಎಪ್ರಿಲ್ 2ರಂದು ಬುಧವಾರ ಬೆಳಿಗ್ಗೆ 8:00 ಗಂಟೆಗೆ ಕೆ.ಎಸ್.ಆರ್.ಪಿ. ಪೆರೇಡ್ ಗ್ರೌಂಡ್ ಕೋರಮಂಗಲ ಬೆಂಗಳೂರು ಇಲ್ಲಿ ನಡೆಯಲಿದೆ.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page