April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗೋಳ್ತಮಜಲಿನ ನೆಟ್ಲ ಶಾಲೆಯಲ್ಲಿ ಮಕ್ಕಳ ಸಂಭ್ರಮದ ಹಪ್ಪಳ ತಯಾರಿಕಾ ಶಿಬಿರ

ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂಭ್ರಮದ ಹಪ್ಪಳ ತಯಾರಿಕಾ ಶಿಬಿರ ಜರಗಿತು.

ಶಾಲಾ ಹಿರಿಯ ವಿದ್ಯಾರ್ಥಿ ಜಯರಾಮ್ ನಾವಡರವರ ನೇತೃತ್ವದಲ್ಲಿ ದೂರದ ಪುತ್ತೂರಿನಿಂದ ಹಲಸಿನಕಾಯಿ ತಂದು ಶಾಲೆಯಲ್ಲಿ ಮಕ್ಕಳಿಗೆ ಹಪ್ಪಳ ಮಾಡುವ ರೀತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿದರು. ಮಕ್ಕಳ ಜೊತೆ ಶಾಲಾ ಶಿಕ್ಷಕರು, ಅಡುಗೆ ಸಿಬ್ಬಂದಿಗಳು, ಮಕ್ಕಳ ಪೋಷಕರು, ಹಿರಿಯ ವಿದ್ಯಾರ್ಥಿಗಳು ಜೊತೆ ಸೇರಿಕೊಂಡರು.

ಹಿಂದಿನ ಕಾಲದ ಅನೇಕ ವಿದ್ಯೆಗಳು ಮರೆತು ಹೋಗುವ ಸಂದರ್ಭದಲ್ಲಿ ಅಂತಹ ವಿದ್ಯೆಗಳನ್ನು ನೆನಪಿಸುವ ಉದ್ದೇಶಕ್ಕೋಸ್ಕರ ಹಪ್ಪಳ ತಯಾರಿಕ ಶಿಬಿರವನ್ನು ಹಮ್ಮಿಕೊಂಡಿದ್ದೇವೆ, ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ತೀರ ಬಡತನದ ಮಧ್ಯೆಯು ಮಳೆಗಾಲದ ಆಹಾರಕ್ಕೋಸ್ಕರ ಯಾವ ರೀತಿ ಆಹಾರ ಪದಾರ್ಥಗಳನ್ನು ಮಾಡಿ ಶೇಖರಣೆ ಮಾಡುತ್ತಿದ್ದರು ಎಂದು ಈಗಿನ ಮಕ್ಕಳಿಗೆ ತಿಳಿಪಡಿಸುವ ಉದ್ದೇಶದಿಂದ ಈ ಹಪ್ಪಳ ತಯಾರಿಕ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಎಂದು ಕಾರ್ಯಕ್ರಮದ ರೂವಾರಿ ಶಾಲಾ ಹಿರಿಯ ವಿದ್ಯಾರ್ಥಿ ಜಯರಾಮ ನಾವಡ ತಿಳಿಸಿದರು.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page