December 11, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗೋಳ್ತಮಜಲಿನ ನೆಟ್ಲ ಶಾಲೆಯಲ್ಲಿ ಮಕ್ಕಳ ಸಂಭ್ರಮದ ಹಪ್ಪಳ ತಯಾರಿಕಾ ಶಿಬಿರ

ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂಭ್ರಮದ ಹಪ್ಪಳ ತಯಾರಿಕಾ ಶಿಬಿರ ಜರಗಿತು.

ಶಾಲಾ ಹಿರಿಯ ವಿದ್ಯಾರ್ಥಿ ಜಯರಾಮ್ ನಾವಡರವರ ನೇತೃತ್ವದಲ್ಲಿ ದೂರದ ಪುತ್ತೂರಿನಿಂದ ಹಲಸಿನಕಾಯಿ ತಂದು ಶಾಲೆಯಲ್ಲಿ ಮಕ್ಕಳಿಗೆ ಹಪ್ಪಳ ಮಾಡುವ ರೀತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿದರು. ಮಕ್ಕಳ ಜೊತೆ ಶಾಲಾ ಶಿಕ್ಷಕರು, ಅಡುಗೆ ಸಿಬ್ಬಂದಿಗಳು, ಮಕ್ಕಳ ಪೋಷಕರು, ಹಿರಿಯ ವಿದ್ಯಾರ್ಥಿಗಳು ಜೊತೆ ಸೇರಿಕೊಂಡರು.

ಹಿಂದಿನ ಕಾಲದ ಅನೇಕ ವಿದ್ಯೆಗಳು ಮರೆತು ಹೋಗುವ ಸಂದರ್ಭದಲ್ಲಿ ಅಂತಹ ವಿದ್ಯೆಗಳನ್ನು ನೆನಪಿಸುವ ಉದ್ದೇಶಕ್ಕೋಸ್ಕರ ಹಪ್ಪಳ ತಯಾರಿಕ ಶಿಬಿರವನ್ನು ಹಮ್ಮಿಕೊಂಡಿದ್ದೇವೆ, ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ತೀರ ಬಡತನದ ಮಧ್ಯೆಯು ಮಳೆಗಾಲದ ಆಹಾರಕ್ಕೋಸ್ಕರ ಯಾವ ರೀತಿ ಆಹಾರ ಪದಾರ್ಥಗಳನ್ನು ಮಾಡಿ ಶೇಖರಣೆ ಮಾಡುತ್ತಿದ್ದರು ಎಂದು ಈಗಿನ ಮಕ್ಕಳಿಗೆ ತಿಳಿಪಡಿಸುವ ಉದ್ದೇಶದಿಂದ ಈ ಹಪ್ಪಳ ತಯಾರಿಕ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಎಂದು ಕಾರ್ಯಕ್ರಮದ ರೂವಾರಿ ಶಾಲಾ ಹಿರಿಯ ವಿದ್ಯಾರ್ಥಿ ಜಯರಾಮ ನಾವಡ ತಿಳಿಸಿದರು.

You may also like

News

ಕೋಮು ದ್ವೇಷ ಭಾಷಣ ಪ್ರಕರಣದಲ್ಲಿ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರಿಗೆ ಜಾಮೀನು

ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಬೆಳೆಸುವ ಮತ್ತು ಅವಮಾನಕಾರಿ ಭಾಷಣ
News

ಬಂಟ್ವಾಳದಲ್ಲಿ ‘ಬೌ ಬೌ ಶವರ್ಮಾ’ ವೈರಲ್ – ಶಾಪ್ ಮುಂದೆ ಇಟ್ಟಿದ್ದ ಶವರ್ಮಾ ನಾಯಿಗೆ ಬಲಿ

ಬಂಟ್ವಾಳದಲ್ಲಿ ‘ಬೌ ಬೌ ಶವರ್ಮಾ’ಎನ್ನುವ ಶೀರ್ಷಿಕೆಯಲ್ಲಿ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಬನ್

You cannot copy content of this page