July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗೋಳ್ತಮಜಲಿನ ನೆಟ್ಲ ಶಾಲೆಯಲ್ಲಿ ಮಕ್ಕಳ ಸಂಭ್ರಮದ ಹಪ್ಪಳ ತಯಾರಿಕಾ ಶಿಬಿರ

ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂಭ್ರಮದ ಹಪ್ಪಳ ತಯಾರಿಕಾ ಶಿಬಿರ ಜರಗಿತು.

ಶಾಲಾ ಹಿರಿಯ ವಿದ್ಯಾರ್ಥಿ ಜಯರಾಮ್ ನಾವಡರವರ ನೇತೃತ್ವದಲ್ಲಿ ದೂರದ ಪುತ್ತೂರಿನಿಂದ ಹಲಸಿನಕಾಯಿ ತಂದು ಶಾಲೆಯಲ್ಲಿ ಮಕ್ಕಳಿಗೆ ಹಪ್ಪಳ ಮಾಡುವ ರೀತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿದರು. ಮಕ್ಕಳ ಜೊತೆ ಶಾಲಾ ಶಿಕ್ಷಕರು, ಅಡುಗೆ ಸಿಬ್ಬಂದಿಗಳು, ಮಕ್ಕಳ ಪೋಷಕರು, ಹಿರಿಯ ವಿದ್ಯಾರ್ಥಿಗಳು ಜೊತೆ ಸೇರಿಕೊಂಡರು.

ಹಿಂದಿನ ಕಾಲದ ಅನೇಕ ವಿದ್ಯೆಗಳು ಮರೆತು ಹೋಗುವ ಸಂದರ್ಭದಲ್ಲಿ ಅಂತಹ ವಿದ್ಯೆಗಳನ್ನು ನೆನಪಿಸುವ ಉದ್ದೇಶಕ್ಕೋಸ್ಕರ ಹಪ್ಪಳ ತಯಾರಿಕ ಶಿಬಿರವನ್ನು ಹಮ್ಮಿಕೊಂಡಿದ್ದೇವೆ, ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ತೀರ ಬಡತನದ ಮಧ್ಯೆಯು ಮಳೆಗಾಲದ ಆಹಾರಕ್ಕೋಸ್ಕರ ಯಾವ ರೀತಿ ಆಹಾರ ಪದಾರ್ಥಗಳನ್ನು ಮಾಡಿ ಶೇಖರಣೆ ಮಾಡುತ್ತಿದ್ದರು ಎಂದು ಈಗಿನ ಮಕ್ಕಳಿಗೆ ತಿಳಿಪಡಿಸುವ ಉದ್ದೇಶದಿಂದ ಈ ಹಪ್ಪಳ ತಯಾರಿಕ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಎಂದು ಕಾರ್ಯಕ್ರಮದ ರೂವಾರಿ ಶಾಲಾ ಹಿರಿಯ ವಿದ್ಯಾರ್ಥಿ ಜಯರಾಮ ನಾವಡ ತಿಳಿಸಿದರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page