November 1, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನನ್ನನ್ನು ಯಾರೂ ಅಪಹರಿಸಿಲ್ಲ, ಸ್ವ ಇಚ್ಛೆಯಿಂದ ಅಕ್ರಮ್ ಜೊತೆ ಹೋಗಿದ್ದೇನೆ – ಜೀನ ಮೆರಿಲ್

ಉಡುಪಿ ನಗರ ಠಾಣೆಯ ಹುಡುಗಿ ಅಪಹರಣ ಪ್ರಕರಣದಲ್ಲಿ, ಹುಡುಗಿಯ ಪೋಷಕರು ಹೈಕೋರ್ಟ್ ನಲ್ಲಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆದಿದ್ದು, ಈ ವಿಚಾರಣೆಗೆ ಹುಡುಗಿಯಾದ ಜೀನ ಮೆರಿಲ್ ಮತ್ತು ಅಕ್ರಮ್ ತನ್ನ ವಕೀಲ ಮುಖೇನ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ನ್ಯಾಯಾಲಯದ ವಿಚಾರಣೆಯಲ್ಲಿ ನ್ಯಾಯಾಧೀಶರ ಮುಂದೆ ತನ್ನನ್ನು ಯಾರೂ ಕೂಡ ಅಪಹರಿಸಿರುವುದಿಲ್ಲ, ನಾನು ಸ್ವ- ಇಚ್ಛೆಯಿಂದ ಅಕ್ರಮ್ ಜೊತೆ ತೆರಳಿರುವುದಾಗಿ ತಿಳಿಸಿರುತ್ತಾಳೆ. ಹುಡುಗಿಯ ತಾಯಿ ಹುಡುಗಿ ಜೊತೆ ಮಾತನಾಡಬೇಕು ಎಂದು ತಿಳಿಸಿದಾಗ, ನ್ಯಾಯಾಧೀಶರು ಸ್ವತಹ ತಮ್ಮ ಕೊಠಡಿಯಲ್ಲಿ ಹುಡುಗಿ ಜೊತೆ ತಾಯಿಯನ್ನು ಮಾತನಾಡಿಸಿರುತ್ತಾರೆ.

ನಂತರ ವಿಚಾರಣೆಯಲ್ಲಿ ತಾಯಿ ಮಗಳನ್ನು ತನ್ನ ಜೊತೆ ಕಳಿಸುವಂತೆ ನ್ಯಾಯಾಧೀಶರಲ್ಲಿ ಕೇಳಿಕೊಂಡಿದ್ದು, ಇದಕ್ಕೆ ಹುಡುಗಿಯು ಒಪ್ಪಿರುವುದಿಲ್ಲ. ಅಲ್ಲದೇ ತಾನು ಅಕ್ರಮ್ ಜೊತೆ ಎಪ್ರಿಲ್ 19ರಂದು ರಿಜಿಸ್ಟರ್ ಮದುವೆ ಮಾಡಿಕೊಳ್ಳುತ್ತಿದ್ದು, ಮದುವೆ ನಂತರ ತಾಯಿಯನ್ನು ಭೇಟಿಯಾಗುವುದಾಗಿ ತಿಳಿಸುತ್ತಾಳೆ. ಅಲ್ಲದೇ ತಾಯಿಯೊಂದಿಗೆ ಕೂಡ ಉತ್ತಮ ಬಾಂಧವ್ಯದೊಂದಿಗೆ ಇರುವುದಾಗಿ ತಿಳಿಸಿರುತ್ತಾಳೆ.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಎಪ್ರಿಲ್ 22 ಕ್ಕೆ ನಿಗದಿಪಡಿಸಿದ್ದು, ಅಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಿರುತ್ತದೆ.

You may also like

News

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಘೋಷಣೆ

ಸಮಾಜಸೇವೆ, ಕಲೆ, ಕ್ರೀಡೆ, ವ್ಯವಹಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಕೊಡುಗೆ ನೀಡಿದ 94 ಸಾಧಕರಿಗೆ ಗೌರವ ದಕ್ಷಿಣ ಕನ್ನಡ ಜಿಲ್ಲಾ ಆಡಳಿತವು 2025ನೇ ವರ್ಷದ ಜಿಲ್ಲಾ
News

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ವಿರುದ್ಧದ ಆರೋಪ ಖಂಡನೀಯ — AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

ರಾಜಕೀಯ ಲಾಭಕ್ಕಾಗಿ ವ್ಯಕ್ತಿತ್ವ ಹಾನಿಗೆ ಯತ್ನಿಸುವಂತ ಹೇಳಿಕೆಗಳನ್ನು ತಕ್ಷಣ ಹಿಂಪಡೆಯಬೇಕು ವಿಧಾನಸಭಾ ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ರವರ ವಿರುದ್ಧ ಶಾಸಕರಾದ ಭರತ್ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿದ್ದ

You cannot copy content of this page