February 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನನ್ನನ್ನು ಯಾರೂ ಅಪಹರಿಸಿಲ್ಲ, ಸ್ವ ಇಚ್ಛೆಯಿಂದ ಅಕ್ರಮ್ ಜೊತೆ ಹೋಗಿದ್ದೇನೆ – ಜೀನ ಮೆರಿಲ್

ಉಡುಪಿ ನಗರ ಠಾಣೆಯ ಹುಡುಗಿ ಅಪಹರಣ ಪ್ರಕರಣದಲ್ಲಿ, ಹುಡುಗಿಯ ಪೋಷಕರು ಹೈಕೋರ್ಟ್ ನಲ್ಲಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆದಿದ್ದು, ಈ ವಿಚಾರಣೆಗೆ ಹುಡುಗಿಯಾದ ಜೀನ ಮೆರಿಲ್ ಮತ್ತು ಅಕ್ರಮ್ ತನ್ನ ವಕೀಲ ಮುಖೇನ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ನ್ಯಾಯಾಲಯದ ವಿಚಾರಣೆಯಲ್ಲಿ ನ್ಯಾಯಾಧೀಶರ ಮುಂದೆ ತನ್ನನ್ನು ಯಾರೂ ಕೂಡ ಅಪಹರಿಸಿರುವುದಿಲ್ಲ, ನಾನು ಸ್ವ- ಇಚ್ಛೆಯಿಂದ ಅಕ್ರಮ್ ಜೊತೆ ತೆರಳಿರುವುದಾಗಿ ತಿಳಿಸಿರುತ್ತಾಳೆ. ಹುಡುಗಿಯ ತಾಯಿ ಹುಡುಗಿ ಜೊತೆ ಮಾತನಾಡಬೇಕು ಎಂದು ತಿಳಿಸಿದಾಗ, ನ್ಯಾಯಾಧೀಶರು ಸ್ವತಹ ತಮ್ಮ ಕೊಠಡಿಯಲ್ಲಿ ಹುಡುಗಿ ಜೊತೆ ತಾಯಿಯನ್ನು ಮಾತನಾಡಿಸಿರುತ್ತಾರೆ.

ನಂತರ ವಿಚಾರಣೆಯಲ್ಲಿ ತಾಯಿ ಮಗಳನ್ನು ತನ್ನ ಜೊತೆ ಕಳಿಸುವಂತೆ ನ್ಯಾಯಾಧೀಶರಲ್ಲಿ ಕೇಳಿಕೊಂಡಿದ್ದು, ಇದಕ್ಕೆ ಹುಡುಗಿಯು ಒಪ್ಪಿರುವುದಿಲ್ಲ. ಅಲ್ಲದೇ ತಾನು ಅಕ್ರಮ್ ಜೊತೆ ಎಪ್ರಿಲ್ 19ರಂದು ರಿಜಿಸ್ಟರ್ ಮದುವೆ ಮಾಡಿಕೊಳ್ಳುತ್ತಿದ್ದು, ಮದುವೆ ನಂತರ ತಾಯಿಯನ್ನು ಭೇಟಿಯಾಗುವುದಾಗಿ ತಿಳಿಸುತ್ತಾಳೆ. ಅಲ್ಲದೇ ತಾಯಿಯೊಂದಿಗೆ ಕೂಡ ಉತ್ತಮ ಬಾಂಧವ್ಯದೊಂದಿಗೆ ಇರುವುದಾಗಿ ತಿಳಿಸಿರುತ್ತಾಳೆ.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಎಪ್ರಿಲ್ 22 ಕ್ಕೆ ನಿಗದಿಪಡಿಸಿದ್ದು, ಅಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಿರುತ್ತದೆ.

You may also like

News

ಅಧಿಕಾರಕ್ಕಿಂತ ಸಮುದಾಯದ ಹಿತವೇ ಮುಖ್ಯ – MLC ಐವನ್ ಡಿಸೋಜ ಕಾರ್ಯವೈಖರಿಗೆ ಹಿರಿಯ ಪತ್ರಕರ್ತ ಹ್ಯಾರಿ ಡಿಸೋಜ ಬೆಂಗಳೂರು ಮೆಚ್ಚುಗೆ

ಬೆಂಗಳೂರು: ರಾಜಕಾರಣಿಗಳು ಸಾಮಾನ್ಯವಾಗಿ ಅಧಿಕಾರವನ್ನು ಉಳಿಸಿಕೊಳ್ಳಲು ಸ್ವಾರ್ಥದ ರಾಜಕಾರಣ ಮಾಡುವುದು ಸಹಜ. ಆದರೆ, ಫೆಬ್ರವರಿ 17ರಂದು ಮಂಗಳವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ
News

ಮೆಸ್ಕಾಂ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ಸ್ಟೀವನ್ ಡಿಸೋಜ ಆಯ್ಕೆ

ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ವ್ಯಾಪ್ತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಚರ್ಚಿಸಿ, ಪರಿಣಾಮಕಾರಿಯಾಗಿ ಪರಿಹರಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆ

You cannot copy content of this page