August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆದರಿಕೆಯ ದೈಹಿಕ ಸಂಪರ್ಕದಿಂದಾಗಿ ಬಾಲಕಿ ಗರ್ಭಿಣಿ –  ಆರೋಪಿಯ ಮೇಲೆ ಕೇಸು ದಾಖಲು

ಆಟೋ ಚಾಲಕ ಮಂಜುನಾಥ್ ಕಟ್ಟತಡ್ಕ ಎಂಬಾತನು ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಕಾಲೇಜಿಗೆ ರಜೆ ಇದ್ದ ದಿನದಂದು, ಬಾಲಕಿ ಮನೆಯಲ್ಲಿ ಒಬ್ಬಳೇ ಇರುವಾಗ ನೀರು ಕೇಳುವ ನೆಪದಲ್ಲಿ ಬಂದು ಬಲಾತ್ಕಾರವಾಗಿ ದೈಹಿಕ ಸಂಪರ್ಕವನ್ನು ಹೊಂದಿದ್ದಾನೆ.

ಬಳಿಕ ಯಾರಲ್ಲೂ ಹೇಳದಂತೆ ಬೆದರಿಕೆಯನ್ನು ಒಡ್ಡಿತ್ತಾನೆ. ಈ ಘಟನೆಯ ಬಳಿಕ ಆರೋಪಿತನು ಬಾಲಕಿಯನ್ನು ಬೆದರಿಸಿ ಇದೇ ರೀತಿ ಏಳೆಂಟು ಬಾರಿ ದೈಹಿಕ ಸಂಪರ್ಕ ಮಾಡಿದ್ದು, ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಕೊನೆಯ ಬಾರಿ ದೈಹಿಕ ಸಂಪರ್ಕ ಮಾಡಿರುತ್ತಾನೆ.

ಏಪ್ರಿಲ್ 5 ರಂದು ಬಾಲಕಿಯ ಆರೋಗ್ಯ ತಪಾಸಣೆಗೆ ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಅವಳು ಗರ್ಭಿಣಿ ಎಂದು ತಿಳಿದುಬಂತು.

ಅಪ್ರಾಪ್ತೆ ಸಂತ್ರಸ್ತೆ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಕಲಂ:  64(2) (m), 352(3) BNS 2023 ಮತ್ತು ಕಲಂ 5(l) ಜೊತೆಗೆ 6 ಪೋಕ್ಸೋ ಕಾಯಿದೆ 2012 ರಂತೆ ಪ್ರಕರಣ ದಾಖಲಾಗಿರುತ್ತದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page