April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆದರಿಕೆಯ ದೈಹಿಕ ಸಂಪರ್ಕದಿಂದಾಗಿ ಬಾಲಕಿ ಗರ್ಭಿಣಿ –  ಆರೋಪಿಯ ಮೇಲೆ ಕೇಸು ದಾಖಲು

ಆಟೋ ಚಾಲಕ ಮಂಜುನಾಥ್ ಕಟ್ಟತಡ್ಕ ಎಂಬಾತನು ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಕಾಲೇಜಿಗೆ ರಜೆ ಇದ್ದ ದಿನದಂದು, ಬಾಲಕಿ ಮನೆಯಲ್ಲಿ ಒಬ್ಬಳೇ ಇರುವಾಗ ನೀರು ಕೇಳುವ ನೆಪದಲ್ಲಿ ಬಂದು ಬಲಾತ್ಕಾರವಾಗಿ ದೈಹಿಕ ಸಂಪರ್ಕವನ್ನು ಹೊಂದಿದ್ದಾನೆ.

ಬಳಿಕ ಯಾರಲ್ಲೂ ಹೇಳದಂತೆ ಬೆದರಿಕೆಯನ್ನು ಒಡ್ಡಿತ್ತಾನೆ. ಈ ಘಟನೆಯ ಬಳಿಕ ಆರೋಪಿತನು ಬಾಲಕಿಯನ್ನು ಬೆದರಿಸಿ ಇದೇ ರೀತಿ ಏಳೆಂಟು ಬಾರಿ ದೈಹಿಕ ಸಂಪರ್ಕ ಮಾಡಿದ್ದು, ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಕೊನೆಯ ಬಾರಿ ದೈಹಿಕ ಸಂಪರ್ಕ ಮಾಡಿರುತ್ತಾನೆ.

ಏಪ್ರಿಲ್ 5 ರಂದು ಬಾಲಕಿಯ ಆರೋಗ್ಯ ತಪಾಸಣೆಗೆ ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಅವಳು ಗರ್ಭಿಣಿ ಎಂದು ತಿಳಿದುಬಂತು.

ಅಪ್ರಾಪ್ತೆ ಸಂತ್ರಸ್ತೆ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಕಲಂ:  64(2) (m), 352(3) BNS 2023 ಮತ್ತು ಕಲಂ 5(l) ಜೊತೆಗೆ 6 ಪೋಕ್ಸೋ ಕಾಯಿದೆ 2012 ರಂತೆ ಪ್ರಕರಣ ದಾಖಲಾಗಿರುತ್ತದೆ.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page