July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆದರಿಕೆಯ ದೈಹಿಕ ಸಂಪರ್ಕದಿಂದಾಗಿ ಬಾಲಕಿ ಗರ್ಭಿಣಿ –  ಆರೋಪಿಯ ಮೇಲೆ ಕೇಸು ದಾಖಲು

ಆಟೋ ಚಾಲಕ ಮಂಜುನಾಥ್ ಕಟ್ಟತಡ್ಕ ಎಂಬಾತನು ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಕಾಲೇಜಿಗೆ ರಜೆ ಇದ್ದ ದಿನದಂದು, ಬಾಲಕಿ ಮನೆಯಲ್ಲಿ ಒಬ್ಬಳೇ ಇರುವಾಗ ನೀರು ಕೇಳುವ ನೆಪದಲ್ಲಿ ಬಂದು ಬಲಾತ್ಕಾರವಾಗಿ ದೈಹಿಕ ಸಂಪರ್ಕವನ್ನು ಹೊಂದಿದ್ದಾನೆ.

ಬಳಿಕ ಯಾರಲ್ಲೂ ಹೇಳದಂತೆ ಬೆದರಿಕೆಯನ್ನು ಒಡ್ಡಿತ್ತಾನೆ. ಈ ಘಟನೆಯ ಬಳಿಕ ಆರೋಪಿತನು ಬಾಲಕಿಯನ್ನು ಬೆದರಿಸಿ ಇದೇ ರೀತಿ ಏಳೆಂಟು ಬಾರಿ ದೈಹಿಕ ಸಂಪರ್ಕ ಮಾಡಿದ್ದು, ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಕೊನೆಯ ಬಾರಿ ದೈಹಿಕ ಸಂಪರ್ಕ ಮಾಡಿರುತ್ತಾನೆ.

ಏಪ್ರಿಲ್ 5 ರಂದು ಬಾಲಕಿಯ ಆರೋಗ್ಯ ತಪಾಸಣೆಗೆ ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಅವಳು ಗರ್ಭಿಣಿ ಎಂದು ತಿಳಿದುಬಂತು.

ಅಪ್ರಾಪ್ತೆ ಸಂತ್ರಸ್ತೆ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಕಲಂ:  64(2) (m), 352(3) BNS 2023 ಮತ್ತು ಕಲಂ 5(l) ಜೊತೆಗೆ 6 ಪೋಕ್ಸೋ ಕಾಯಿದೆ 2012 ರಂತೆ ಪ್ರಕರಣ ದಾಖಲಾಗಿರುತ್ತದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page