February 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆದರಿಕೆಯ ದೈಹಿಕ ಸಂಪರ್ಕದಿಂದಾಗಿ ಬಾಲಕಿ ಗರ್ಭಿಣಿ –  ಆರೋಪಿಯ ಮೇಲೆ ಕೇಸು ದಾಖಲು

ಆಟೋ ಚಾಲಕ ಮಂಜುನಾಥ್ ಕಟ್ಟತಡ್ಕ ಎಂಬಾತನು ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಕಾಲೇಜಿಗೆ ರಜೆ ಇದ್ದ ದಿನದಂದು, ಬಾಲಕಿ ಮನೆಯಲ್ಲಿ ಒಬ್ಬಳೇ ಇರುವಾಗ ನೀರು ಕೇಳುವ ನೆಪದಲ್ಲಿ ಬಂದು ಬಲಾತ್ಕಾರವಾಗಿ ದೈಹಿಕ ಸಂಪರ್ಕವನ್ನು ಹೊಂದಿದ್ದಾನೆ.

ಬಳಿಕ ಯಾರಲ್ಲೂ ಹೇಳದಂತೆ ಬೆದರಿಕೆಯನ್ನು ಒಡ್ಡಿತ್ತಾನೆ. ಈ ಘಟನೆಯ ಬಳಿಕ ಆರೋಪಿತನು ಬಾಲಕಿಯನ್ನು ಬೆದರಿಸಿ ಇದೇ ರೀತಿ ಏಳೆಂಟು ಬಾರಿ ದೈಹಿಕ ಸಂಪರ್ಕ ಮಾಡಿದ್ದು, ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಕೊನೆಯ ಬಾರಿ ದೈಹಿಕ ಸಂಪರ್ಕ ಮಾಡಿರುತ್ತಾನೆ.

ಏಪ್ರಿಲ್ 5 ರಂದು ಬಾಲಕಿಯ ಆರೋಗ್ಯ ತಪಾಸಣೆಗೆ ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಅವಳು ಗರ್ಭಿಣಿ ಎಂದು ತಿಳಿದುಬಂತು.

ಅಪ್ರಾಪ್ತೆ ಸಂತ್ರಸ್ತೆ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಕಲಂ:  64(2) (m), 352(3) BNS 2023 ಮತ್ತು ಕಲಂ 5(l) ಜೊತೆಗೆ 6 ಪೋಕ್ಸೋ ಕಾಯಿದೆ 2012 ರಂತೆ ಪ್ರಕರಣ ದಾಖಲಾಗಿರುತ್ತದೆ.

You may also like

News

ಕಥೊಲಿಕ್ ಸಭಾ ಸುರತ್ಕಲ್ ವಲಯದ ದಶಮಾನೋತ್ಸವ ಸಂಭ್ರಮ

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ – ವೆಲೆಂಟೈನ್ ಡಿಸೋಜ ನಿವೃತ್ತ DSP   ಸುರತ್ಕಲ್ ಇಲ್ಲಿನ ಸೆಕ್ರೆಡ್ ಹಾರ್ಟ್ ಚರ್ಚ್ ಸಭಾಂಗಣದಲ್ಲಿ ಫೆಬ್ರವರಿ 8ರಂದು ಭಾನುವಾರ ಕಥೊಲಿಕ್
News

ಕಾಸರಗೋಡು ನಗರಸಭೆಯ 9ನೇ ವಾರ್ಡ್ ಸಭೆ ಯಶಸ್ವಿ

ಮಾದರಿ ನಗರಸಭೆ ನಿರ್ಮಾಣಕ್ಕೆ ನಗರಸಭಾ ಅಧ್ಯಕ್ಷೆ ಶಾಹಿನಾ ಸಲೀಂ ಸಂಕಲ್ಪ ಕಾಸರಗೋಡು ನಗರಸಭೆಯ 2026–27ನೇ ವಾರ್ಷಿಕ ಯೋಜನೆ ರೂಪಿಕರಣದ ಅಂಗವಾಗಿ 9ನೇ ವಾರ್ಡ್‌ನ ನುಳ್ಳಿಪಾಡಿ (ಅಣಂಗೂರು, ಜೆ.ಪಿ.

You cannot copy content of this page