July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾರವಾರ ಧರ್ಮಕ್ಷೇತ್ರದ ಕಥೊಲಿಕ್ ಅಸೋಸಿಯೇಶನ್ ವತಿಯಿಂದ ರಾಜಕೀಯ ಜಾಗೃತಿ ಶಿಬಿರ

ಕಾರವಾರ ಥರ್ಮಕ್ಷೇತ್ರದ ಕಥೊಲಿಕ್ ಅಸೋಸಿಯೇಷನ್ ವತಿಯಿಂದ ಕಾರವಾರ ಧರ್ಮಕ್ಷೇತ್ರದ ಮಟ್ಟದಲ್ಲಿ ರಾಜಕೀಯ ಜಾಗೃತಿ ಶಿಬಿರವನ್ನು ಎಪ್ರಿಲ್ 06ರಂದು ಆದಿತ್ಯವಾರ ಕುಮಟಾ ಸೈಂಟ್ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರವಾರ ಧರ್ಮಕ್ಷೇತ್ರದ ಶ್ರೇಷ್ಠ ಧರ್ಮಗುರುಗಳಾದ ಮೊನ್ಸಿಜ್ಞೊರ್ ರಿಚರ್ಡ್ ರೊಡ್ರಿಗಸ್ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಅಖಿಲ ಭಾರತ ಕಥೊಲಿಕ್ ಯೂನಿಯನ್ ಇದರ ಕರ್ನಾಟಕ ಪ್ರಾಂತ್ಯದ ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಆಲ್ವಿನ್ ಡಿಸೋಜ ಪಾನೀರ್ ಇವರೀರ್ವರನ್ನು ಸನ್ಮಾನಿಸಲಾಯಿತು. ಇಂದಿನ ಪರಿಸ್ಥಿತಿಯಲ್ಲಿ ರಾಜಕೀಯಕ್ಕೆ ಕೊಂಕಣಿಗರ ಅಗತ್ಯತೆ ಬಗ್ಗೆ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ಮತ್ತು ಪ್ರಸ್ತುತ ರಾಜಕೀಯ ಆಗೂಹೋಗುಗಳ ಬಗ್ಗೆ ಆಲ್ವಿನ್ ಡಿಸೋಜರವರು ಮಾತಾನಾಡಿದರು. ಕಾರ್ಯಕ್ರಮದಲ್ಲಿ ಕಥೊಲಿಕ್ ಅಸೋಸಿಯೇಷನ್ ಡಯಾಸಿಸ್ ಆಫ್ ಕಾರವಾರದ ಅಧ್ಯಕ್ಷ ಜೋರ್ಜ್ ಫೆರ್ನಾಂಡಿಸ್, ಉಪಾಧ್ಯಕ್ಷ ಸ್ಟಿಫನ್ ರೊಡ್ರಿಗಸ್, ಕಾರ್ಯದರ್ಶಿ ಕ್ಲೆಮೆಂಟ್ ಗುಡಿನ್ಹೂ, ರಾಜಕೀಯ ಸಮಿತಿ ಅಧ್ಯಕ್ಷ ಕೈತಾನಾ ಬಾರ್ಬೋಜಾ, ರಾಜಕೀಯ ಜಾಗೃತಿ ಶಿಬಿರದ ಸಂಘಟನೆಯ ಅಧ್ಯಕ್ಷ ಜೋಸೆಪ್ ನೊರೊನ್ಹಾ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page