September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೀವನ್ ತಾವ್ರೊ ಆತ್ಮಹತ್ಯೆಗೆ ಪ್ರಚೋದನೆ – ಪೋಲೀಸರಿಂದ ಇಬ್ಬರ ದಸ್ತಗಿರಿ

ಆರೋಪಿಗಳಿಗೆ ನ್ಯಾಯಾಲಯದಿಂದ ನ್ಯಾಯಾಂಗ ಬಂಧನ

ತಪ್ಪು ಮಾಡಿದವರನ್ನು ದೇವರು ಒಂದಲ್ಲಾ ಒಂದು ದಿನ ಶಿಕ್ಷೆ ನೀಡೇ ನೀಡುತ್ತಾರೆ. ಇದಕ್ಕೆ ಪುಷ್ಟಿ ನೀಡುವಂತಹ ಘಟನೆ ಬಂಟ್ವಾಳ ತಾಲೂಕಿನ ಆಮ್ಟಾಡಿಯಲ್ಲಿ ನಡೆದಿದೆ. ಅಮ್ಟಾಡಿ  ಗ್ರಾಮದ ನಿವಾಸಿ ಜೀವನ್ ತಾವ್ರೊ ಫೆಬ್ರವರಿ 10ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಬಂಟ್ವಾಳ ನಗರ  ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆಯ ಅ.ಕ್ರ. 14/2025 ಕಲಂ 108, 318 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿತ್ತು.

ಸದ್ರಿ ಪ್ರಕರಣದಲ್ಲಿ ಪೋಲಿಸರು ತನಿಖೆ ನಡೆಸಿದಾಗ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರಿಂದ ಜೀವನ್ ನೇಣಿಗೆ ಶರಣಾಗಿದ್ದ ಎಂದು ತಿಳಿದು ಬಂದಿದೆ. ಈ ತನಿಖೆಯಂತೆ ಎಪ್ರಿಲ್ 5ರಂದು ಶನಿವಾರ ಆರೋಪಿಗಳಾದ ಬಂಟ್ವಾಳ ಕುರಿಯಾಳ ಗ್ರಾಮದ ನಿವಾಸಿ ಪ್ರವೀಣ್ ಡೇಸಾ ಮತ್ತು ಸೋರ್ನಾಡು ಗ್ರಾಮದ ನಿವಾಸಿ ರೋಹನ್ ಪಿಂಟೋ ಎಂಬವರನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page