April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೀವನ್ ತಾವ್ರೊ ಆತ್ಮಹತ್ಯೆಗೆ ಪ್ರಚೋದನೆ – ಪೋಲೀಸರಿಂದ ಇಬ್ಬರ ದಸ್ತಗಿರಿ

ಆರೋಪಿಗಳಿಗೆ ನ್ಯಾಯಾಲಯದಿಂದ ನ್ಯಾಯಾಂಗ ಬಂಧನ

ತಪ್ಪು ಮಾಡಿದವರನ್ನು ದೇವರು ಒಂದಲ್ಲಾ ಒಂದು ದಿನ ಶಿಕ್ಷೆ ನೀಡೇ ನೀಡುತ್ತಾರೆ. ಇದಕ್ಕೆ ಪುಷ್ಟಿ ನೀಡುವಂತಹ ಘಟನೆ ಬಂಟ್ವಾಳ ತಾಲೂಕಿನ ಆಮ್ಟಾಡಿಯಲ್ಲಿ ನಡೆದಿದೆ. ಅಮ್ಟಾಡಿ  ಗ್ರಾಮದ ನಿವಾಸಿ ಜೀವನ್ ತಾವ್ರೊ ಫೆಬ್ರವರಿ 10ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಬಂಟ್ವಾಳ ನಗರ  ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆಯ ಅ.ಕ್ರ. 14/2025 ಕಲಂ 108, 318 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿತ್ತು.

ಸದ್ರಿ ಪ್ರಕರಣದಲ್ಲಿ ಪೋಲಿಸರು ತನಿಖೆ ನಡೆಸಿದಾಗ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರಿಂದ ಜೀವನ್ ನೇಣಿಗೆ ಶರಣಾಗಿದ್ದ ಎಂದು ತಿಳಿದು ಬಂದಿದೆ. ಈ ತನಿಖೆಯಂತೆ ಎಪ್ರಿಲ್ 5ರಂದು ಶನಿವಾರ ಆರೋಪಿಗಳಾದ ಬಂಟ್ವಾಳ ಕುರಿಯಾಳ ಗ್ರಾಮದ ನಿವಾಸಿ ಪ್ರವೀಣ್ ಡೇಸಾ ಮತ್ತು ಸೋರ್ನಾಡು ಗ್ರಾಮದ ನಿವಾಸಿ ರೋಹನ್ ಪಿಂಟೋ ಎಂಬವರನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page