February 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೀವನ್ ತಾವ್ರೊ ಆತ್ಮಹತ್ಯೆಗೆ ಪ್ರಚೋದನೆ – ಪೋಲೀಸರಿಂದ ಇಬ್ಬರ ದಸ್ತಗಿರಿ

ಆರೋಪಿಗಳಿಗೆ ನ್ಯಾಯಾಲಯದಿಂದ ನ್ಯಾಯಾಂಗ ಬಂಧನ

ತಪ್ಪು ಮಾಡಿದವರನ್ನು ದೇವರು ಒಂದಲ್ಲಾ ಒಂದು ದಿನ ಶಿಕ್ಷೆ ನೀಡೇ ನೀಡುತ್ತಾರೆ. ಇದಕ್ಕೆ ಪುಷ್ಟಿ ನೀಡುವಂತಹ ಘಟನೆ ಬಂಟ್ವಾಳ ತಾಲೂಕಿನ ಆಮ್ಟಾಡಿಯಲ್ಲಿ ನಡೆದಿದೆ. ಅಮ್ಟಾಡಿ  ಗ್ರಾಮದ ನಿವಾಸಿ ಜೀವನ್ ತಾವ್ರೊ ಫೆಬ್ರವರಿ 10ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಬಂಟ್ವಾಳ ನಗರ  ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆಯ ಅ.ಕ್ರ. 14/2025 ಕಲಂ 108, 318 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿತ್ತು.

ಸದ್ರಿ ಪ್ರಕರಣದಲ್ಲಿ ಪೋಲಿಸರು ತನಿಖೆ ನಡೆಸಿದಾಗ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರಿಂದ ಜೀವನ್ ನೇಣಿಗೆ ಶರಣಾಗಿದ್ದ ಎಂದು ತಿಳಿದು ಬಂದಿದೆ. ಈ ತನಿಖೆಯಂತೆ ಎಪ್ರಿಲ್ 5ರಂದು ಶನಿವಾರ ಆರೋಪಿಗಳಾದ ಬಂಟ್ವಾಳ ಕುರಿಯಾಳ ಗ್ರಾಮದ ನಿವಾಸಿ ಪ್ರವೀಣ್ ಡೇಸಾ ಮತ್ತು ಸೋರ್ನಾಡು ಗ್ರಾಮದ ನಿವಾಸಿ ರೋಹನ್ ಪಿಂಟೋ ಎಂಬವರನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

You may also like

News

ದಾಯ್ಜಿವರ್ಲ್ಡ್@25: ಮಾನವೀಯ ಮೌಲ್ಯಗಳ ಮಾಧ್ಯಮ ಕ್ರಾಂತಿ – ಅನಿವಾಸಿ ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಶ್ಲಾಘನೆ

ಮಂಗಳೂರು: “ಕೇವಲ ಸುದ್ದಿ ಪ್ರಸಾರ ಮಾಡುವುದಷ್ಟೇ ಅಲ್ಲದೆ, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ‘ ದಾಯ್ಜಿವರ್ಲ್ಡ್ ‘ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಿದೆ,” ಎಂದು ಅನಿವಾಸಿ ಭಾರತೀಯ
News

ಮಂಗಳೂರಿನಲ್ಲಿ ಸಂತ ಆಂತೋನಿ ಪುಣ್ಯ ಅವಶೇಷಗಳ ಹಬ್ಬದ ಭವ್ಯ ಆಚರಣೆ

ನಮ್ಮ ಮಾತುಗಳು ಇತರರಿಗೆ ನೋವು ನೀಡುವ ಬದಲು ಭರವಸೆ ಮತ್ತು ಸಾಂತ್ವನ ನೀಡುವಂತಿರಲಿ – ನಿವೃತ್ತ ಆರ್ಚ್ ಬಿಷಪ್ ಡಾ| ಬರ್ನಾರ್ಡ್ ಮೊರಾಸ್ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ

You cannot copy content of this page