July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸರ್ಕಾರಿ ನೌಕರ 48 ಗಂಟೆಗೂ ಹೆಚ್ಚು ಕಾಲ ಬಂಧನದಲ್ಲಿದ್ದರೆ ಸೇವೆಯಿಂದ ತಂತಾನೇ ಅಮಾನತು- ಹೈಕೋರ್ಟ್

ರಾಜ್ಯ ಸರ್ಕಾರಿ ನೌಕರನೊಬ್ಬ 48 ಗಂಟೆಗಳಿಗೂ ಹೆಚ್ಚು ಕಾಲ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಕಾಯಿದೆಯ ಅಡಿಯಲ್ಲಿ ಬಂಧನದಲ್ಲಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆಯಾದರೆ ಆತನನ್ನು ಸೇವೆಯಿಂದ ತಂತಾನೇ ಅಮಾನತುಗೊಂಡಿರುತ್ತಾನೆ. ಈ ಹಿನ್ನಲೆಯಲ್ಲಿ ಸಕ್ಷಮ ಪ್ರಾಧಿಕಾರ ಅಮಾನತು ರದ್ದುಗೊಳಿಸಿ ಮುಂದಿನ ಔಪಚಾರಿಕ ಆದೇಶ ಹೊರಡಿಸುವ ತನಕ ಆತನ ಅಮಾನತು ಮುಂದುವರೆಯುತ್ತದೆ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕರ್ನಾಟಕ ಆಡಳಿತ ನ್ಯಾಯಾಧಿಕರಣ (ಕಎಟಿ) ನೀಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮ ಪಂಚಾಯ್ತಿ ಪಿಡಿಓ ಡಿ.ಎಂ. ಪದ್ಮನಾಭ ಎಂಬುವರು ಹೈಕೋರ್ಟ್ ಗೆ ಅರ್ಜಿಯಲ್ಲಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ಸಿ.ಎಂ. ಜೋಶಿ ಅವರ ವಿಭಾಗೀಯ ಪೀಠವು ಇಂತಹ ಅರ್ಜಿಯನ್ನು ವಜಾಗೊಳಿಸಿದೆ.

ಸರ್ಕಾರಿ ನೌಕರ ಬಂಧನಕ್ಕೆ ಒಳಗಾಗಿದ್ದ ನಂತರ, ನ್ಯಾಯಾಲಯದಿಂದ ಜಾಮೀನು ಪಡೆದು ಹೊರಗೆ ಬಂದ ಮೇಲೆ ನೇರ ಕಚೇರಿಗೆ ಹೋಗಬಹುದೇ ಇಲ್ಲವೇ ಎಂಬುದನ್ನು 2015ರ ಸರ್ಕಾರಿ ಸುತ್ತೋಲೆಯ ಪ್ರಕಾರ ಸಕ್ಷಮ ಪ್ರಾಧಿಕಾರ ನಿರ್ಧರಿಸಬೇಕು. ಅಂತಹ ಸರ್ಕಾರಿ ಅಧಿಕಾರಿಯ ಅಮಾನತು ಆದೇಶವನ್ನು ರದ್ದುಪಡಿಸಬೇಕೋ, ಬೇಡವೋ ಎಂಬ ಬಗ್ಗೆಯೂ ಪ್ರಾಧಿಕಾರವೇ ಅಂತಿಮ ನಿರ್ಣಯ ಕೈಗೊಳ್ಳಬೇಕು ಎಂದು ಹೇಳಿತು.

ಇನ್ನು ಕರ್ನಾಟಕ ನಾಗರೀಕ ನಿಯಮಗಳು 1957ರ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮ 10 (2) (ಎ) ನಿಯಮಗಳ ಪ್ರಕಾರ ಸರ್ಕಾರಿ ನೌಕರ 48 ಗಂಟೆಗಳಿಗೂ ಹೆಚ್ಚುಕಾಲ ಬಂಧನದಲ್ಲಿದ್ದರೆ ಸೇವೆಯಿಂದ ತಂತಾನೆ ಅಮಾನತುಗೊಳ್ಳುತ್ತಾನೆ ಎಂಬುದಾಗಿ ತಿಳಿಸಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page