May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾರಿನ ಹೊರಭಾಗಕ್ಕೆ ನಿಂತು ಬೊಬ್ಬೆ ಹಾಕಿ ಪ್ರಯಾಣ – ಪ್ರಕರಣ ದಾಖಲು

ಆಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ವಾಹನ ಚಾಲನೆ ಮಾಡಿದ್ದಲ್ಲದೆ ಕಾರು ಚಲಿಸುತ್ತಿರುವಾಗಲೇ ಕಾರಿನ ಕಿಟಕಿಗಳ ಮುಖಾಂತರ ದೇಹವನ್ನು ಹೊರಭಾಗಕ್ಕೆ ಹಾಕಿ, ನಿಂತು ಹಾಗೂ ಬೊಬ್ಬೆ ಹಾಕಿ ಪ್ರಯಾಣಿಸಿದ ಘಟನೆ ಇದೇ ಎಪ್ರಿಲ್ 5ರಂದು ಸಾಯಂಕಾಲ ಮಾಣಿ ಮೈಸೂರು ಹೆದ್ದಾರಿ ರಸ್ತೆಯಲ್ಲಿ ನಡೆದಿದೆ.

ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ ಪರಿಸರದಲ್ಲಿ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಕೆಎ 09 ಎಂ.ಜಿ. 5880 ನಂಬರಿನ ಕಾರಲ್ಲಿ 5 ಯುವಜನರು ನಿಂತು, ಕಿಟಕಿಯಿಂದ ದೇಹಗಳು ಹೊರಗಿದ್ದರೂ, ರಸ್ತೆಯಲ್ಲಿ ಸಂಚರಿಸುವ ಇತರ ವಾಹನಗಳನ್ನು ಅಪಾಯಕರ ರೀತಿಯಲ್ಲಿ ಓವರ್ ಟೇಕ್ ಮಾಡಿದ ಕಾರು ಚಾಲಕನ ಈ ಕೃತ್ಯವು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿರುತ್ತದೆ.

ಈ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಅ.ಕ್ರ. 50/25 ಕಲಂ:281 BNS 2023 ಮತ್ತು 184 IMV Act ನಂತೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ. ಸದ್ರಿ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಕೃತ್ಯದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವ ತನಿಖೆ ಮುಂದುವರಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page