July 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾರಿನ ಹೊರಭಾಗಕ್ಕೆ ನಿಂತು ಬೊಬ್ಬೆ ಹಾಕಿ ಪ್ರಯಾಣ – ಪ್ರಕರಣ ದಾಖಲು

ಆಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ವಾಹನ ಚಾಲನೆ ಮಾಡಿದ್ದಲ್ಲದೆ ಕಾರು ಚಲಿಸುತ್ತಿರುವಾಗಲೇ ಕಾರಿನ ಕಿಟಕಿಗಳ ಮುಖಾಂತರ ದೇಹವನ್ನು ಹೊರಭಾಗಕ್ಕೆ ಹಾಕಿ, ನಿಂತು ಹಾಗೂ ಬೊಬ್ಬೆ ಹಾಕಿ ಪ್ರಯಾಣಿಸಿದ ಘಟನೆ ಇದೇ ಎಪ್ರಿಲ್ 5ರಂದು ಸಾಯಂಕಾಲ ಮಾಣಿ ಮೈಸೂರು ಹೆದ್ದಾರಿ ರಸ್ತೆಯಲ್ಲಿ ನಡೆದಿದೆ.

ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ ಪರಿಸರದಲ್ಲಿ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಕೆಎ 09 ಎಂ.ಜಿ. 5880 ನಂಬರಿನ ಕಾರಲ್ಲಿ 5 ಯುವಜನರು ನಿಂತು, ಕಿಟಕಿಯಿಂದ ದೇಹಗಳು ಹೊರಗಿದ್ದರೂ, ರಸ್ತೆಯಲ್ಲಿ ಸಂಚರಿಸುವ ಇತರ ವಾಹನಗಳನ್ನು ಅಪಾಯಕರ ರೀತಿಯಲ್ಲಿ ಓವರ್ ಟೇಕ್ ಮಾಡಿದ ಕಾರು ಚಾಲಕನ ಈ ಕೃತ್ಯವು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿರುತ್ತದೆ.

ಈ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಅ.ಕ್ರ. 50/25 ಕಲಂ:281 BNS 2023 ಮತ್ತು 184 IMV Act ನಂತೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ. ಸದ್ರಿ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಕೃತ್ಯದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವ ತನಿಖೆ ಮುಂದುವರಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

You may also like

News

ಮಂಗಳೂರಿನಲ್ಲಿ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನ; ಇಬ್ಬರು ಹಿರಿಯ ಕವಯತ್ರಿಯರಿಗೆ ಗೌರವ – ರೇಮಂಡ್ ಡಿಕುನಾ ತಾಕೊಡೆ

ಮಂಗಳೂರಿನಲ್ಲಿ ಜುಲೈ 19ರಂದು ಭಾನುವಾರ ನಡೆಯಲಿರುವ 5ನೇ ರಾಷ್ಟ್ರೀಯ ಕೊಂಕಣಿ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಮಂಗಳೂರಿನ ಹಿರಿಯ ಕವಯತ್ರಿ ಅರುಂಧತಿ ವಿ. ರಾವ್ ಹಾಗೂ ಗೋವಾದ ಹಿರಿಯ
News

Mangalore Diocese Equips Parish Convenors to Strengthen Inter-Religious Harmony

The Inter-Religious Dialogue Commission of the Diocese of Mangalore conducted a training programme for Parish Convenors on Sunday at the

You cannot copy content of this page