April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುಣಚ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಸಂತೋಷ್ ರೈ ಬೈಲುಗುತ್ತು ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜ್ ಮಣಿಲ ಆಯ್ಕೆ

ಪುಣಚ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದ ಯುವ ಮುಂದಾಳು ಸಂತೋಷ್ ರೈ ಬೈಲುಗುತ್ತು ಇವರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯುವ ನಾಯಕ ಯುವ ಹೋರಾಟಗಾರ ಬಡವರ ಬಗ್ಗೆ ಸಮಾಜದ ಜನಸಾಮಾನ್ಯರ ಪರವಾಗಿ ಸದಾ ಕಾಲ ಕೆಲಸ ಮಾಡುವ ಸಿರಾಜ್ ಮಣಿಲ ಆಯ್ಕೆಯಾಗಿದ್ದಾರೆ.

ಸಂತೋಷ್ ರೈ ಬೈಲುಗುತ್ತು ಅವರು ಈ ಹಿಂದೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಸಮಾಜದಲ್ಲಿ ಅನೇಕ ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಸಮಾಜದ ಸರ್ವ ಧರ್ಮಿಯರ ಪ್ರೀತಿ ವಿಶ್ವಾಸವನ್ನು ಪಡೆದಿದ್ದಾರೆ. ಯುವಕರ ಪ್ರತಿಯೊಂದು ಕಾರ್ಯಕ್ರಮಗಳು ಮತ್ತು ಸಾಮಾಜಿಕ ಚಿಂತನೆಗಳಿಗೆ ಪ್ರೋತ್ಸಾಹವನ್ನು ನಿರಂತರವಾಗಿ ಮಾಡಿಕೊಂಡು ಮುನ್ನಡೆದಿದ್ದಾರೆ.

ಪುಣಚ ವಲಯ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷ ಸಂತೋಷ್ ರೈ ಬೈಲುಗುತ್ತು, ಉಪಾಧ್ಯಕ್ಷರುಗಳಾಗಿ ಸಿರಿಲ್ ಫೆರಾವೋ, ಉಲ್ಲಾಸ್ ಪೂಜಾರಿ, ಅಬ್ದುಲ್ ರಹಿಮಾನ್ ಅಜ್ಜಿನಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜ್ ಮಣಿಲ, ಕಾರ್ಯದರ್ಶಿಗಳಾಗಿ ಅಶೋಕ್ ಗರಡಿ, ಅನಿತಾ ನಡುಸಾರ್, ಐತಪ್ಪ ಅಗ್ರಾಳ, ರಮೇಶ್ ಕಂಬಲಿಮೂಲೆ ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಉಪಾಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ಹಿತ್ತಿಲು ಆಯ್ಕೆಯಾಗಿದ್ದಾರೆ.

ಆಯ್ಕೆಗೊಂಡ ಎಲ್ಲಾ ಪದಾಧಿಕಾರಿಗಳನ್ನು ಪುಣಚ ವಲಯ ಕಾಂಗ್ರೆಸ್ ಅಭಿನಂದಿಸಿದೆ.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page