May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುಣಚ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಸಂತೋಷ್ ರೈ ಬೈಲುಗುತ್ತು ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜ್ ಮಣಿಲ ಆಯ್ಕೆ

ಪುಣಚ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದ ಯುವ ಮುಂದಾಳು ಸಂತೋಷ್ ರೈ ಬೈಲುಗುತ್ತು ಇವರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯುವ ನಾಯಕ ಯುವ ಹೋರಾಟಗಾರ ಬಡವರ ಬಗ್ಗೆ ಸಮಾಜದ ಜನಸಾಮಾನ್ಯರ ಪರವಾಗಿ ಸದಾ ಕಾಲ ಕೆಲಸ ಮಾಡುವ ಸಿರಾಜ್ ಮಣಿಲ ಆಯ್ಕೆಯಾಗಿದ್ದಾರೆ.

ಸಂತೋಷ್ ರೈ ಬೈಲುಗುತ್ತು ಅವರು ಈ ಹಿಂದೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಸಮಾಜದಲ್ಲಿ ಅನೇಕ ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಸಮಾಜದ ಸರ್ವ ಧರ್ಮಿಯರ ಪ್ರೀತಿ ವಿಶ್ವಾಸವನ್ನು ಪಡೆದಿದ್ದಾರೆ. ಯುವಕರ ಪ್ರತಿಯೊಂದು ಕಾರ್ಯಕ್ರಮಗಳು ಮತ್ತು ಸಾಮಾಜಿಕ ಚಿಂತನೆಗಳಿಗೆ ಪ್ರೋತ್ಸಾಹವನ್ನು ನಿರಂತರವಾಗಿ ಮಾಡಿಕೊಂಡು ಮುನ್ನಡೆದಿದ್ದಾರೆ.

ಪುಣಚ ವಲಯ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷ ಸಂತೋಷ್ ರೈ ಬೈಲುಗುತ್ತು, ಉಪಾಧ್ಯಕ್ಷರುಗಳಾಗಿ ಸಿರಿಲ್ ಫೆರಾವೋ, ಉಲ್ಲಾಸ್ ಪೂಜಾರಿ, ಅಬ್ದುಲ್ ರಹಿಮಾನ್ ಅಜ್ಜಿನಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜ್ ಮಣಿಲ, ಕಾರ್ಯದರ್ಶಿಗಳಾಗಿ ಅಶೋಕ್ ಗರಡಿ, ಅನಿತಾ ನಡುಸಾರ್, ಐತಪ್ಪ ಅಗ್ರಾಳ, ರಮೇಶ್ ಕಂಬಲಿಮೂಲೆ ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಉಪಾಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ಹಿತ್ತಿಲು ಆಯ್ಕೆಯಾಗಿದ್ದಾರೆ.

ಆಯ್ಕೆಗೊಂಡ ಎಲ್ಲಾ ಪದಾಧಿಕಾರಿಗಳನ್ನು ಪುಣಚ ವಲಯ ಕಾಂಗ್ರೆಸ್ ಅಭಿನಂದಿಸಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page