July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುಣಚ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಸಂತೋಷ್ ರೈ ಬೈಲುಗುತ್ತು ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜ್ ಮಣಿಲ ಆಯ್ಕೆ

ಪುಣಚ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದ ಯುವ ಮುಂದಾಳು ಸಂತೋಷ್ ರೈ ಬೈಲುಗುತ್ತು ಇವರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯುವ ನಾಯಕ ಯುವ ಹೋರಾಟಗಾರ ಬಡವರ ಬಗ್ಗೆ ಸಮಾಜದ ಜನಸಾಮಾನ್ಯರ ಪರವಾಗಿ ಸದಾ ಕಾಲ ಕೆಲಸ ಮಾಡುವ ಸಿರಾಜ್ ಮಣಿಲ ಆಯ್ಕೆಯಾಗಿದ್ದಾರೆ.

ಸಂತೋಷ್ ರೈ ಬೈಲುಗುತ್ತು ಅವರು ಈ ಹಿಂದೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಸಮಾಜದಲ್ಲಿ ಅನೇಕ ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಸಮಾಜದ ಸರ್ವ ಧರ್ಮಿಯರ ಪ್ರೀತಿ ವಿಶ್ವಾಸವನ್ನು ಪಡೆದಿದ್ದಾರೆ. ಯುವಕರ ಪ್ರತಿಯೊಂದು ಕಾರ್ಯಕ್ರಮಗಳು ಮತ್ತು ಸಾಮಾಜಿಕ ಚಿಂತನೆಗಳಿಗೆ ಪ್ರೋತ್ಸಾಹವನ್ನು ನಿರಂತರವಾಗಿ ಮಾಡಿಕೊಂಡು ಮುನ್ನಡೆದಿದ್ದಾರೆ.

ಪುಣಚ ವಲಯ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷ ಸಂತೋಷ್ ರೈ ಬೈಲುಗುತ್ತು, ಉಪಾಧ್ಯಕ್ಷರುಗಳಾಗಿ ಸಿರಿಲ್ ಫೆರಾವೋ, ಉಲ್ಲಾಸ್ ಪೂಜಾರಿ, ಅಬ್ದುಲ್ ರಹಿಮಾನ್ ಅಜ್ಜಿನಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜ್ ಮಣಿಲ, ಕಾರ್ಯದರ್ಶಿಗಳಾಗಿ ಅಶೋಕ್ ಗರಡಿ, ಅನಿತಾ ನಡುಸಾರ್, ಐತಪ್ಪ ಅಗ್ರಾಳ, ರಮೇಶ್ ಕಂಬಲಿಮೂಲೆ ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಉಪಾಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ಹಿತ್ತಿಲು ಆಯ್ಕೆಯಾಗಿದ್ದಾರೆ.

ಆಯ್ಕೆಗೊಂಡ ಎಲ್ಲಾ ಪದಾಧಿಕಾರಿಗಳನ್ನು ಪುಣಚ ವಲಯ ಕಾಂಗ್ರೆಸ್ ಅಭಿನಂದಿಸಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page