September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುಣಚ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಸಂತೋಷ್ ರೈ ಬೈಲುಗುತ್ತು ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜ್ ಮಣಿಲ ಆಯ್ಕೆ

ಪುಣಚ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದ ಯುವ ಮುಂದಾಳು ಸಂತೋಷ್ ರೈ ಬೈಲುಗುತ್ತು ಇವರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯುವ ನಾಯಕ ಯುವ ಹೋರಾಟಗಾರ ಬಡವರ ಬಗ್ಗೆ ಸಮಾಜದ ಜನಸಾಮಾನ್ಯರ ಪರವಾಗಿ ಸದಾ ಕಾಲ ಕೆಲಸ ಮಾಡುವ ಸಿರಾಜ್ ಮಣಿಲ ಆಯ್ಕೆಯಾಗಿದ್ದಾರೆ.

ಸಂತೋಷ್ ರೈ ಬೈಲುಗುತ್ತು ಅವರು ಈ ಹಿಂದೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಸಮಾಜದಲ್ಲಿ ಅನೇಕ ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಸಮಾಜದ ಸರ್ವ ಧರ್ಮಿಯರ ಪ್ರೀತಿ ವಿಶ್ವಾಸವನ್ನು ಪಡೆದಿದ್ದಾರೆ. ಯುವಕರ ಪ್ರತಿಯೊಂದು ಕಾರ್ಯಕ್ರಮಗಳು ಮತ್ತು ಸಾಮಾಜಿಕ ಚಿಂತನೆಗಳಿಗೆ ಪ್ರೋತ್ಸಾಹವನ್ನು ನಿರಂತರವಾಗಿ ಮಾಡಿಕೊಂಡು ಮುನ್ನಡೆದಿದ್ದಾರೆ.

ಪುಣಚ ವಲಯ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷ ಸಂತೋಷ್ ರೈ ಬೈಲುಗುತ್ತು, ಉಪಾಧ್ಯಕ್ಷರುಗಳಾಗಿ ಸಿರಿಲ್ ಫೆರಾವೋ, ಉಲ್ಲಾಸ್ ಪೂಜಾರಿ, ಅಬ್ದುಲ್ ರಹಿಮಾನ್ ಅಜ್ಜಿನಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜ್ ಮಣಿಲ, ಕಾರ್ಯದರ್ಶಿಗಳಾಗಿ ಅಶೋಕ್ ಗರಡಿ, ಅನಿತಾ ನಡುಸಾರ್, ಐತಪ್ಪ ಅಗ್ರಾಳ, ರಮೇಶ್ ಕಂಬಲಿಮೂಲೆ ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಉಪಾಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ಹಿತ್ತಿಲು ಆಯ್ಕೆಯಾಗಿದ್ದಾರೆ.

ಆಯ್ಕೆಗೊಂಡ ಎಲ್ಲಾ ಪದಾಧಿಕಾರಿಗಳನ್ನು ಪುಣಚ ವಲಯ ಕಾಂಗ್ರೆಸ್ ಅಭಿನಂದಿಸಿದೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page