April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

39ನೇ ಪಳ್ಳೀರು ವಾರ್ಡಿನ ಸೈಂಟ್ ಜೋಸೆಫ್ ನಗರ ಕಾಲೋನಿಯಲ್ಲಿ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ MLC ಐವನ್ ಡಿಸೋಜ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಳ್ಳೀರು ವಾರ್ಡಿನ ಸೈಂಟ್ ಜೋಸೆಫ್ ನಗರದಲ್ಲಿ ಕಾಂಕ್ರೀಟ್‌ ರಸ್ತೆಯ ಅವಶ್ಯಕತೆ ಬಹಳವಾಗಿದ್ದು ಅನೇಕ ವರ್ಷಗಳಿಂದ ರಸ್ತೆಗಾಗಿ ಅನುದಾನದ ಬೇಡಿಕೆಯನ್ನು ಇಟ್ಟಿದ್ದು ಸ್ಥಳೀಯರ ಬೇಡಿಕೆಯಂತೆ  ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಅನುದಾನದಿಂದ ವಿಧಾನ ಪರಿಷದ್ ಸದಸ್ಯ ಐವನ್ ಡಿಸೋಜ ಇವರ ಮುತುವರ್ಜಿಯಲ್ಲಿ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿ ನಡೆಯಿತು. ಇದರ ಉದ್ಘಾಟನೆಯನ್ನು ಇಂದು ಎಪ್ರಿಲ್ 14ರಂದು ಸೋಮವಾರದಂದು MLC ಐವನ್ ಡಿಸೋಜರವರು ನೆರವೇರಿಸಿದರು. ಕೇವಲ 45 ದಿನಗಳಲ್ಲಿ ಈ ಕಾಮಗಾರಿಯು ನಡೆದಿದ್ದು ಉತ್ತಮವಾದ ರಸ್ತೆ ನಿರ್ಮಾಣ ಮಾಡುವ ಮೂಲಕ ಸ್ಥಳೀಯ ಜನರ ಬೇಡಿಕೆಯನ್ನು  ಈಡೇರಿಸಲಾಗಿದೆ ಎಂದು ಉದ್ಘಾಟನೆಯ ಬಳಿಕ ಅವರು ತಿಳಿಸಿದರು.

ಸಾರ್ವಜನಿಕ ಕೆಲಸಗಳು ಅತ್ಯಂತ ಪಾರದರ್ಶಕದ ಜೊತೆಗೆ ಸಾರ್ವಜನಿಕರು ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸಂತಸ ತಂದಿದೆ ಎಂದು ಸ್ಥಳೀಯವಾಗಿ ಸಾರ್ವಜನಿಕರು ಕೂಡ ಈ ರಸ್ತೆ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಭೂತ ಸೌಕರ್ಯ ಒದಗಿಸಿ ಕೊಡುವಲ್ಲಿ ಬಹಳ ಶ್ರಮ ವಹಿಸಿರುತ್ತಾರೆ ಎಂದು  ಶ್ಲಾಘಿಸಿದರು.

ಜೆಪ್ಪುವಿನಲ್ಲಿರುವ ಸೈಂಟ್‌ ಜೋಸೆಫ್ ಚರ್ಚ್ ಇದರ ಧರ್ಮಗುರುಗಳಾದ ವಂದನೀಯ ಫಾದರ್ ಮ್ಯಾಕ್ಸಿಂ ಡಿಸೋಜ ರವರು ಮಾತನಾಡಿ ಬಹಳ ಉತ್ತಮವಾದ ಕಾಮಗಾರಿ. ಈ ಕಾಮಗಾರಿಯ ಅವಶ್ಯಕತೆ ಕಳೆದ ನಾಲ್ಕು ವರ್ಷಗಳಿಂದ ಸಾರ್ವಜನಿಕರು ಬೇಡಿಕೆ ಇಟ್ಟಿದ್ದು ಈ ಬೇಡಿಕೆಯನ್ನು ಈಡೇರಿಸಿದ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜರವರಿಗೆ ಹಾಗೂ ರಾಜ್ಯ ಸರ್ಕಾರಕ್ಕೂ ಅಭಿನಂದನೆಗಳನ್ನು ಸಲ್ಲಿಸಿದರು. ಮಾಜಿ ಮೇಯರ್ ಹಾಗೂ ಕಾರ್ಪೊರೇಟರ್ ಜೆಸಿಂತಾ ವಿಜಯ ಆಲ್ಪ್ರೇಡ್‌ ಸ್ವಾಗತಿಸಿದರು. ಸ್ಥಳೀಯರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನೀತು, ಭಾಸ್ಕರ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page