May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕದ್ರಿ ಮಂಜುನಾಥೇಶ್ವರ ದೇವರ ಆಡಳಿತ ಮಂಡಳಿ ನೇಮಕ ಸದಸ್ಯರಿಗೆ ವಿಧಾನ ಪರಿಷತ್‌ ಶಾಸಕ ಐವನ್‌ ಡಿಸೋಜಾರವರಿಂದ  ಮಹಾನಗರ ಪಾಲಿಕೆ ಕಛೇರಿಯಲ್ಲಿ ಸನ್ಮಾನ

ದೇವರ ಸೇವೆ ಮಾಡುವ ಅವಕಾಶ ಪಡೆದಿರುವ ಟ್ರಸ್ಟಿಗಳು ಸಮಾಜದ ಎಲ್ಲಾ ವರ್ಗಗಳ ಸೇವೆಗಳಿಗೆ ಬದ್ದರಾಗಿದ್ದು ಸಮಾಜಿಕ ಸೇವೆ ಬದ್ದತೆಯಿಂದ ಮಾಡುವುದರ ಮೂಲಕ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಶಕ್ತಿ ಬರಲಿ ಎಂದು ವಿಧಾನ ಪರಿಷತ್‌ ಶಾಸಕ ಐವನ್‌ ಡಿಸೋಜಾರವರ ಮಹಾನಗರ ಪಾಲಿಕೆ ಕಛೇರಿಯಲ್ಲಿ ನೂತನವಾಗಿ ನೇಮಕಗೊಂಡ ಆಡಳಿತ ಮಂಡಳಿಯ ಸದಸ್ಯರನ್ನು ಸನ್ಮಾನಿಸಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ದೇವರಾಜ್‌ ಕೆ. ಮಾತನಾಡಿ ದೇವರ ಕೆಲಸ ಮತ್ತು ಸಮಾಜದ ಕೆಲಸವನ್ನು ತಾರತಮ್ಯ ಮಾಡದೇ ಎಲ್ಲಾ ವರ್ಗಗಳ ಜನರನ್ನು ಸಮಾಜಕ್ಕೆ ಒಳಿತಾಗುವುದು ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಮಂಜುನಾಥೇಶ್ವರ ದೇವಸ್ಥಾನದ ಟ್ರಸ್ಟಿಗಳಾದ ಕಿರಣ್‌ ಜೆ., ಪ್ರೀತಾ ನಂದನ್‌, ಉಷಾ ಪ್ರಭಾಕರ್‌, ರಾಜೇಂದ್ರ, ನಾರಾಯಣ್‌ ಕೋಟ್ಯಾನ್‌, ದಿಲ್‌ ರಾಜ್‌ ಆಳ್ವ ಉಪಸ್ಥಿತರಿದ್ದು ಎಲ್ಲರಿಗೂ ಶಾಸಕರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾಜಿ ಕಾರ್ಫೋರೇಟರಾದ ಡಿ.ಕೆ. ಅಶೋಕ್‌ ಕುಮಾರ್‌, ಜೆ. ನಾಗೇಂದ್ರ ಕುಮಾರ್‌, ಅಮೃತ್‌ ವಿ. ಕದ್ರಿ, ಭಾಸ್ಕರ್‌ ರಾವ್‌, ಪದ್ಮನಾಭ ಅಮೀನ್‌, ಗಿರೀಶ್‌ ಆಳ್ವ, ವಿಕಾಸ್‌ ಶೆಟ್ಟಿ, ಬಾಜಿಲ್‌ ಕುಲಶೇಖರ್‌ ಮುಂತಾದವರು ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page