August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕದ್ರಿ ಮಂಜುನಾಥೇಶ್ವರ ದೇವರ ಆಡಳಿತ ಮಂಡಳಿ ನೇಮಕ ಸದಸ್ಯರಿಗೆ ವಿಧಾನ ಪರಿಷತ್‌ ಶಾಸಕ ಐವನ್‌ ಡಿಸೋಜಾರವರಿಂದ  ಮಹಾನಗರ ಪಾಲಿಕೆ ಕಛೇರಿಯಲ್ಲಿ ಸನ್ಮಾನ

ದೇವರ ಸೇವೆ ಮಾಡುವ ಅವಕಾಶ ಪಡೆದಿರುವ ಟ್ರಸ್ಟಿಗಳು ಸಮಾಜದ ಎಲ್ಲಾ ವರ್ಗಗಳ ಸೇವೆಗಳಿಗೆ ಬದ್ದರಾಗಿದ್ದು ಸಮಾಜಿಕ ಸೇವೆ ಬದ್ದತೆಯಿಂದ ಮಾಡುವುದರ ಮೂಲಕ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಶಕ್ತಿ ಬರಲಿ ಎಂದು ವಿಧಾನ ಪರಿಷತ್‌ ಶಾಸಕ ಐವನ್‌ ಡಿಸೋಜಾರವರ ಮಹಾನಗರ ಪಾಲಿಕೆ ಕಛೇರಿಯಲ್ಲಿ ನೂತನವಾಗಿ ನೇಮಕಗೊಂಡ ಆಡಳಿತ ಮಂಡಳಿಯ ಸದಸ್ಯರನ್ನು ಸನ್ಮಾನಿಸಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ದೇವರಾಜ್‌ ಕೆ. ಮಾತನಾಡಿ ದೇವರ ಕೆಲಸ ಮತ್ತು ಸಮಾಜದ ಕೆಲಸವನ್ನು ತಾರತಮ್ಯ ಮಾಡದೇ ಎಲ್ಲಾ ವರ್ಗಗಳ ಜನರನ್ನು ಸಮಾಜಕ್ಕೆ ಒಳಿತಾಗುವುದು ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಮಂಜುನಾಥೇಶ್ವರ ದೇವಸ್ಥಾನದ ಟ್ರಸ್ಟಿಗಳಾದ ಕಿರಣ್‌ ಜೆ., ಪ್ರೀತಾ ನಂದನ್‌, ಉಷಾ ಪ್ರಭಾಕರ್‌, ರಾಜೇಂದ್ರ, ನಾರಾಯಣ್‌ ಕೋಟ್ಯಾನ್‌, ದಿಲ್‌ ರಾಜ್‌ ಆಳ್ವ ಉಪಸ್ಥಿತರಿದ್ದು ಎಲ್ಲರಿಗೂ ಶಾಸಕರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾಜಿ ಕಾರ್ಫೋರೇಟರಾದ ಡಿ.ಕೆ. ಅಶೋಕ್‌ ಕುಮಾರ್‌, ಜೆ. ನಾಗೇಂದ್ರ ಕುಮಾರ್‌, ಅಮೃತ್‌ ವಿ. ಕದ್ರಿ, ಭಾಸ್ಕರ್‌ ರಾವ್‌, ಪದ್ಮನಾಭ ಅಮೀನ್‌, ಗಿರೀಶ್‌ ಆಳ್ವ, ವಿಕಾಸ್‌ ಶೆಟ್ಟಿ, ಬಾಜಿಲ್‌ ಕುಲಶೇಖರ್‌ ಮುಂತಾದವರು ಉಪಸ್ಥಿತರಿದ್ದರು.

You may also like

News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ
News

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವೆಬ್‌ಸೈಟ್ ಅನಾವರಣ

“ಕಷ್ಟದಲ್ಲಿರುವವರಿಗೆ ನೆರವಾದ ತೃಪ್ತಿ ನನ್ನದು” – ಹರಿಕೃಷ್ಣ ಪುನರೂರು ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ತಮ್ಮಿಂದಾದ ನೆರವು ನೀಡಿದ ಸಂತೃಪ್ತಿ ಇದೆ. “ಕೊಟ್ಟದ್ದು ತನಗೆ, ಬಚ್ಚಿಟ್ಟದ್ದು ಪರರಿಗೆ” ಎಂಬ ಮಾತಿನಂತೆ

You cannot copy content of this page