November 9, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹಳೇ ಆರೋಪಿಯಿಂದ ಪರಂಗಿಪೇಟೆಯಲ್ಲಿ ಬೀಗ ಮುರಿದು ಕಳ್ಳತನ – ಆರೋಪಿ ನಝೀರ್‌ ಮಹಮ್ಮದ್ ಅಂದರ್

2024ರಲ್ಲಿ ಕಣ್ಣೂರು ಟಿ.ವಿ.ಎಸ್‌. ಶೊರೂಮ್‌ ನ ಗಾಜು ಒಡೆದು ಹಣ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಹಳೇ ಆರೋಪಿ 26 ವರ್ಷ ಪ್ರಾಯದ ನಝೀರ್‌ ಮಹಮ್ಮದ್‌ ಕಣ್ಣೂರು, ಇವನು ದಿನಾಂಕ ಎಪ್ರಿಲ್ 11/12ರ ಮಧ್ಯರಾತ್ರಿ ಪುದು ಗ್ರಾಮದ ಪರಂಗಿಪೇಟೆಯಲ್ಲಿರುವ ವಿಶ್ವಾಸ ಸಿಟಿ ಸೆಂಟರ್ ನ ವೈಟ್ ಲೈನ್ ಕಿಡ್ಸ್ ವರ್ಲ್ಡ್ ಬಟ್ಟೆ ಅಂಗಡಿಗೆ ನುಗ್ಗಿ ಕಳವುಗೈದ ಘಟನೆಗೆ‌ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 42/2025 ಕಲಂ: 331(4) 305 ಬಿ.ಎನ್‌.ಎಸ್. ರಂತೆ ಪ್ರಕರಣ ದಾಖಲಾಗಿರುತ್ತದೆ.

ಇವನನ್ನು ಎಪ್ರಿಲ್ 19ರಂದು ದಸ್ತಗಿರಿ ಮಾಡಿ, ಆತನಿಂದ ಕಳವುಗೈದ ನಗದಿನ ಪೈಕಿ   ರೂಪಾಯಿ 1,09,490/-ನಗದು ಮತ್ತು ಕೃತ್ಯಕ್ಕೆ ಬಳಸಿದ ಮೋಟಾರ್‌ ಸೈಕಲ್‌ ನ್ನು ಸ್ವಾಧೀನಪಡಿಸಲಾಗಿದೆ. ಬಂಟ್ವಾಳ‌ ಗ್ರಾಮಾಂತರ ಪೊಲೀಸ್‌ ಠಾಣಾ  ಪೊಲೀಸ್ ನಿರೀಕ್ಷಕ ಶಿವಕುಮಾರ ಬಿ. ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ ಸದ್ರಿ ಪ್ರಕರಣದ‌ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

You may also like

News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆ 2025-28

ನವಂಬರ್ 9ರಂದು ನಾಳೆ ಜಿದ್ದಾಜಿದ್ದಿನ ಹೋರಾಟಕ್ಕೆ ಅಖಾಡ ಸಿದ್ಧ ಘಟಾನುಘಟಿಗಳ ನಡುವೆ ನಡೆಯಲಿದೆ ಫೈಟ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ
News

ಸೈಂಟ್ ತೆರೆಸಾ ಆಫ್ ಲಿಶುಕ್ಸ್ ರವರ ಸಂತ ಪದವಿಯ ಶತಮಾನೋತ್ಸವ

ನಾಳೆ ನವೆಂಬರ್ 9ರಂದು ಬೆಂದೂರ್ ಚರ್ಚ್ ಇಲ್ಲಿ ದಿವ್ಯ ಬಲಿಪೂಜೆ   ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರ ನೇತೃತ್ವ ಸೈಂಟ್ ತೆರೆಸಾ ಆಫ್

You cannot copy content of this page