ಬೀಗ ಹಾಕಿದ ಮನೆಯಿಂದ ಚಿನ್ನಾಭರಣ ಹಾಗೂ ಹಣ ದರೋಡೆ – ಪ್ರಕರಣ ದಾಖಲು

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ, ಕೊಲ್ಪೆದಬೈಲು, ಮಾಲಾಡಿ ಗ್ರಾಮ ಮತ್ತು ಅಂಚೆ, ಬೆಳ್ತಂಗಡಿಯಲ್ಲಿನ ವಸಂತಿ ಹೆಗ್ಡೆ ಇವರ ಮನೆಯ ಮುಂದಿನ ಬಾಗಿಲಿಗೆ ಹಾಕಿರುವ ಬೀಗದ ಕೊಂಡಿಯನ್ನು ಕಳ್ಳರು ಮುರಿದು ಮನೆಯೊಳಗೆ ಪ್ರವೇಶಿಸಿದ್ದಾರೆ. ಕೋಣೆಯ ಕಪಾಟುಗಳಲ್ಲಿದ್ದ ಚಿನ್ನಾಭರಣಗಳನ್ನು ಹಾಗೂ ನಗದು ರೂಪಾಯಿ 30,000/- ಹಣವನ್ನು ಕಳ್ಳರು ಕಳವು ಮಾಡಿದ್ದಾರೆ.
58 ವರ್ಷದ ವಸಂತಿ ಹೆಗ್ಡೆಯವರು ತಮ್ಮ ಮಗ ಹಾಗೂ ಸೊಸೆ ಜೊತೆಗೆ ಎಪ್ರಿಲ್ 20ರಂದು ಮಧ್ಯಾಹ್ನ ಬೆಳ್ತಂಗಡಿಗೆ ಹೋಗಿದ್ದರು. ಸಂಜೆ ವಾಪಸ್ ಮನೆಗೆ ಬರುವಾಗ ಕಳ್ಳತನ ಆದದ್ದು ಬೆಳಕಿಗೆ ಬಂದಿದೆ. ಕಳವಾದ ಚಿನ್ನಾಭರಣಗಳ ಒಟ್ಟು ತೂಕ 160.5 ಗ್ರಾಂ ಆಗಿದ್ದು ಇದರ ಮೌಲ್ಯ ರೂಪಾಯಿ 13,72,000/- ಆಗಿರುತ್ತದೆ. ನಗದು ಸೇರಿ ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂಪಾಯಿ 14,02,000/- ಆಗಿರುತ್ತದೆ. ವಸಂತಿ ಶೆಟ್ಟಿ ನೀಡಿದ ದೂರಿನಂತೆ, ಪುಂಜಾಲಕಟ್ಟೆ ಠಾಣಾ ಅ.ಕ್ರ 25/2025 ಕಲಂ: 331(3), 305 BNS- 2023 ಯಂತೆ ಪ್ರಕರಣ ದಾಖಲಾಗಿರುತ್ತದೆ.