January 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜ್ಪೆ ಚರ್ಚ್ ನ ಯುವಕ ಜೋಶ್ವಾ ಪಿಂಟೊ ಅಪಘಾತದಲ್ಲಿ ಮೃತ್ಯು

ಏಪ್ರಿಲ್ 20ರಂದು ಈಸ್ಟರ್ ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಿ, ಮಂಗಳೂರಿನಿಂದ ತನ್ನ ಮಿತ್ರರೊಡನೆ ಕಾರಲ್ಲಿ ವಾಪಸ್ ಪೆರ್ಮುದೆಗೆ ಬರುವಾಗ, ಆಕಸ್ಮಿಕ ಅವಘಡ ಸಂಭವಿಸಿ ಬಜ್ಪೆ ಚರ್ಚ್ ನ ಯುವಕ 27 ವರ್ಷ ಪ್ರಾಯದ ಜೋಶ್ವಾ ಪಿಂಟೊ ಮೃತಪಟ್ಟಿದ್ದಾರೆ. ತನ್ನ ಕಾರಲ್ಲಿ ಮಿತ್ರರೊಂದಿಗೆ ಬರುವಾಗ ರಸ್ತೆಯಲ್ಲಿನ ಹೊಂಡಕ್ಕೆ ಕಾರು ಬಡಿದು, ನಿಯಂತ್ರಣ ಕಳೆದುಕೊಂಡು ತಿರುವಿನಲ್ಲಿ ಕಾರು ತಲೆಕೆಳಗಾಗಿ ಮಗುಚಿ ಬಿದ್ದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ತನ್ನ ಸಮುದಾಯದಲ್ಲಿ ನಿಸ್ವಾರ್ಥ ಸೇವೆ ಮಾಡುವ ಜೋಶ್ವಾ ಪಿಂಟೊ ಬಜ್ಪೆ ಚರ್ಚ್ ನ ಸದಸ್ಯರಾಗಿದ್ದರು. ಆತನ ನಾಯಕತ್ವ ಗುಣಗಳಿಗೆ ಹಾಗೂ ಎಲ್ಲರೊಂದಿಗೆ ಸ್ನೇಹದಿಂದ ಇದ್ದ ಇವರನ್ನು ಚರ್ಚಿನವರೆಲ್ಲರೂ ಗೌರವಿಸುತ್ತಿದ್ದರು. ಆತನ ಆಕಸ್ಮಿಕ ಸಾವಿಗೆ ಎಲ್ಲಾ ಕಡೆಯಿಂದಲೂ ಸಂತಾಪ ಸೂಚಕಗಳು ಕುಟುಂಬಕ್ಕೆ ಹರಿದು ಬರುತ್ತಿವೆ. ಅವರ ಅಂತ್ಯಕ್ರಿಯೆಯು ನಾಳೆ ಏಪ್ರಿಲ್ 22ರಂದು ಮಂಗಳವಾರ ಸಾಯಂಕಾಲ 4 ಗಂಟೆಗೆ ಸಂತ ಜೋಸೆಫರ ದೇವಾಲಯ ಬಜಪೆಯಲ್ಲಿ ನಡೆಯಲಿದೆ.

You may also like

News

ಮಂಗಳೂರಿನಲ್ಲಿ 9ನೇ ಅಂತರ್‌ರಾಷ್ಟ್ರೀಯ ಗಾಳಿಪಟ ಉತ್ಸವ – ಜನವರಿ 17–18 ರಂದು ಬ್ಲೂ ಬೇ ಬೀಚ್‌ನಲ್ಲಿ ವೈಭವ

ಕರಾವಳಿ ಉತ್ಸವದ ಅಂಗವಾಗಿ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ‘ಟೀಮ್ ಮಂಗಳೂರು’ ಹವ್ಯಾಸಿ ಗಾಳಿಪಟ ತಂಡವು ಮಂಗಳೂರಿನ ತಣ್ಣೀರುಬಾವಿಯ ನವೀಕರಣಗೊಂಡ ಬ್ಲೂ ಬೇ ಬೀಚ್‌ನಲ್ಲಿ 9ನೇ ಅಂತರ್‌ರಾಷ್ಟ್ರೀಯ
News

ಧರ್ಮ ಕೇಳಿ ಅವಾಚ್ಯ ನಿಂದನೆ ಹಾಗೂ ಹಲ್ಲೆ – ಕೊಲೆಯತ್ನ ಪ್ರಕರಣದಲ್ಲಿ ಕಾವೂರು ಠಾಣಾ ಪೊಲೀಸರಿಂದ ಮೂವರ ಬಂಧನ

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಧರ್ಮ ವಿಚಾರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

You cannot copy content of this page