May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಸ್ವಲಾತ್ ವಾರ್ಷಿಕ ಕಾರ್ಯಕ್ರಮ

ಅಹ್ಲ್ ಸುನ್ನತ್ ವಲ್ ಜಮಾ‌ಅತ್ ಮಾತ್ರ ಅಲ್ಲಾಹನ ಬಳಿ ಸ್ವೀಕರಿಸಲ್ಪಡುತ್ತದೆ. ನೂತನ ವಾದದೊಂದಿಗೆ ಸೇರಿ ಈಮಾನ್ ಕಳೆದುಕೊಳ್ಳಬೇಡಿ – ಉಲಮಾಗಳಿಂದ ಎಚ್ಚರಿಕೆಯ ಸಂದೇಶ

ಮಾಣಿ ಇಲ್ಲಿನ ಬದ್ರಿಯಾ ಜುಮ್ಮಾ ಮಸೀದಿ ಸೂರಿಕುಮೇರು ಇದರ ಸ್ವಲಾತ್ ವಾರ್ಷಿಕ ಮತ್ತು ಮತ ಪ್ರಭಾಷಣ ಕಾರ್ಯಕ್ರಮವು ಎಪ್ರಿಲ್ 19ರಂದು ಶನಿವಾರ ಹಾಗೂ 20ರಂದು ಆದಿತ್ಯವಾರ ನಡೆಯಿತು. ಪ್ರಮುಖ ವಾಗ್ಮಿಗಳಾದ ರಫೀಕ್ ಸ‌ಅದಿ ದೇಲಂಪಾಡಿ ಮತ್ತು ಹನೀಫ್ ನಿಝಾಮಿ ಮೊಗ್ರಾಲ್ ರವರು ಇಸ್ಲಾಂ ಧರ್ಮದಲ್ಲಿ ನೂತನವಾದಿಗಳು ಮತ್ತು ಪರಂಪರಾಗತ ಇಸ್ಲಾಂ ಧರ್ಮ ಎಂಬ ವಿಷಯಗಳನ್ನು ಮುಂದಿಟ್ಟು ಮಾತನಾಡಿ ಹೊಸ ಹೊಸ ವಾದಗಳೊಂದಿಗೆ ಸಾಮಾನ್ಯ ಜನರ ಬ್ರೈನ್ ವಾಶ್ ಮಾಡಿ ಈಮಾನ್ ಕಬಳಿಸುವ ನೂತನವಾದಿಗಳ ಸರ್ವ ವಾದಗಳಿಗೆ ಪುರಾವೆಗಳೊಂದಿಗೆ ವಿವರ ನೀಡಿದರು.

ಸಯ್ಯಿದ್ ಶಿಹಾಬುದ್ದೀನ್ ಅಲ್ ಹೈದ್ರೋಸಿ ತಂಙಳ್ ಕಿಲ್ಲೂರು ನೂತನವಾದಿಗಳೊಂದಿಗೆ ಸೇರಿ ದೀನ್ ವಿಕೃತ ಗೊಳಿಸುವ ಅಪಾಯದ ಬಗ್ಗೆ ಪ್ರಭಾಷಣ ನಡೆಸಿದ ಬಳಿಕ ದುಆ ನೆರವೇರಿಸಿಕೊಟ್ಟರು. ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಖತೀಬ್ ಹಸೈನಾರ್ ಸ‌ಅದಿ ಬದಿಯಡ್ಕ, ಸದರ್ ಮುಅಲ್ಲಿಂ ನಾಸಿರ್ ಸ‌ಅದಿ ನೇರಳಕಟ್ಟೆ, ಅಧ್ಯಾಪಕ ಹನೀಫ್ ಸ‌ಅದಿ ಸೆರ್ಕಳ, ಅಧ್ಯಕ್ಷ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಅಮೀರುದ್ದೀನ್, ಕೋಶಾಧಿಕಾರಿ ಯೂಸುಫ್ ಹಾಜಿ, ಮಾಜಿ ಅಧ್ಯಕ್ಷ ಹಾಜಿ ಅಬ್ದುಲ್‌ ಹಮೀದ್, ಮುಹಮ್ಮದಾಲಿ ಮುಸ್ಲಿಯಾರ್, ಮುಸ್ತಫಾ ಸ‌ಅದಿ ಸೂರಿಕುಮೇರು ಸಹಿತ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಮದ್ರಸಾ ವಿದ್ಯಾರ್ಥಿಗಳಿಂದ ದಫ್ ಪ್ರದರ್ಶನ ನಡೆಯಿತು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page