September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಗೊನೆ ಮುಹೂರ್ತ

ಬಂಟ್ವಾಳ ತಾಲೂಕು ನೆಟ್ಲಮುಡ್ನೂರು ಹಾಗೂ ಅನಂತಾಡಿ ಉಭಯ ಗ್ರಾಮಗಳಿಗೆ ಸಂಬಂದಪಟ್ಟ ಇತೀಹಾಸ ಪ್ರಸಿದ್ಧ ಕರಿಂಕ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದ ವರ್ಷಾವಧಿ ಜಾತ್ರೆಯು ಬ್ರಹ್ಮ ಶ್ರೀ ವೇ.ಮೂ. ನಿಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿವರ್ಯರ ನೇತೃತ್ವದಲ್ಲಿ ಮೇ 01ರಿಂದ ಗುರುವಾರ ರಾತ್ರಿ ಹಾಗೂ ಮೇ 02ನೇ ಶುಕ್ರವಾರದಂದು ವೈಭವದಿಂದ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ನಡೆಯುವ ಗೊನೆ ಕಡಿಯುವ ಮೂಹೂರ್ತವನ್ನು ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಇವರು ಇಂದು ಬೆಳಿಗ್ಗೆ 9.45ರ ಸುಮುಹೂರ್ತದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನರೇಂದ್ರ ರೈಯವರು ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯ ಕಿರಣ್ ಹೆಗ್ಡೆ, ಸೇಸಪ್ಪ ಗೌಡ ಉಪಸ್ಥಿತರಿದ್ದರು. ನೆಟ್ಲಮುಡ್ನೂರು ಗ್ರಾಮದ ಶ್ರೀ ಕ್ಷೇತ್ರದ ಭಕ್ತ ಬಿ. ಚೇತನ್ ರೈ, ಡಾ. ಮನೋಹರ ರೈ, ಜಗನ್ನಾಥ ಶೆಟ್ಟಿ ಕರಿಂಕ, ಚೇತನ್ ಶೆಟ್ಟಿ ಹೊಸ ಒಕ್ಲು, ದಾಮೋದರ ಕಾಪಿಕ್ಕಾಡ್, ಜತ್ತಪ್ಪ ಪೂಜಾರಿ, ಕರಿಂಕ ಡೊಂಬಯ್ಯ ಗೌಡ ಕರಿಂಕ ಹಾಗೂ ದೇವಸ್ಥಾನದ ಪ್ರಭಂಧಕರಾದ ಗೌರೀಶ್ ಶೆಟ್ಟಿಯವರು ಉಪಸ್ಥಿತರಿದ್ದರು.

ದಿನಾಂಕ 01-02-205ನೇ ಗುರುವಾರ ರಾತ್ರಿ ಗಂಟೆ 8ರಿಂದ ಮಹೋತ್ಸವ ಬಲಿ, ಭೂತ ಬಲಿ ನಡೆದು ಸಾರ್ವಜನಿಕ ಅನ್ನ ಸಂತರ್ಪಣೆ ನಡೆದು, ಜಿಲ್ಲೆಯ ಹೆಸರಾಂತ ಕಲಾವಿದರಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಮರುದಿನ ಬೆಳಿಗ್ಗೆ ಗಂಟೆ 9.30ರಿಂದ ಹಗಲು ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣದಲ್ಲಿ ಪ್ರಸಾದ ವಿತರಣೆ ನಡೆದು ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆದು, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ.

ಅಂತೆಯೇ ತಾರೀಕು 12-05-2025 ನೇ ಸೋಮವಾರ ಬೆಳಿಗ್ಗೆ ಗಂಟೆ 9ರಿಂದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಪ್ರಯುಕ್ತ ಗಣಪತಿ ಹೋಮ, ಕಲಶಾಭಿಷೇಕ ನಡೆದು ಸಾರ್ವಜನಿಕ ಅನ್ನ ಸಂತರ್ಪಣೆ ನಡೆದು ರಾತ್ರಿ ಗಂಟೆ 7ರಿಂದ ಮಹಾ ರಂಗಪೂಜೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಕ್ಷೇತ್ರದ ಭಕ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ. ನರೇಂದ್ರ ರೈಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page