July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಪೋಪ್ ಫ್ರಾನ್ಸಿಸ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆಗೆ ಕರೆ 

ಕಿಸ್ತರ ಶಾಂತಿಯಲ್ಲಿ ವಿಶ್ರಾಂತಿ ಪಡೆದ ಕಥೊಲಿಕ ಕ್ರೈಸ್ತ ಸಮುದಾಯದ ಪರಮಪೂಜ್ಯ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರ ಸ್ಮರಣಾರ್ಥ ಏಪ್ರಿಲ್ 25ರಂದು ಶುಕ್ರವಾರ ಸಂಜೆ 5:00 ಘಂಟೆಗೆ ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಪೋಪ್ ಅವರಿಗಾಗಿ ವಿಶೇಷ ಪ್ರಾರ್ಥನೆ ಹಾಗೂ ಬಲಿಪೂಜೆಯನ್ನು ನಡೆಸಲಾಗುವುದು.

ಬಳಿಕ ಚರ್ಚ್ ಮೈದಾನದಲ್ಲಿ ಶೋಕ ಸಭೆಯು ನಡೆಯಲಿರುವುದು. ಮಂಗಳೂರು ಧರ್ಮಕ್ಷೇತ್ರ ಶೋಕ ವ್ಯಕ್ತಪಡಿಸುವ ಜೊತೆಗೆ ದೇವರ ಶಾಶ್ವತ ವಿಶ್ರಾಂತಿಗೆ ಕರೆಯಲ್ಪಟ್ಟ ಪೋಪ್ ಫ್ರಾನ್ಸಿಸ್ ರವರ ಜೀವನವನ್ನು ಪ್ರೇರಣೆಯಾಗಿ ಮುಂದುವರಿಸಲು ನಾವು ಒಟ್ಟಾಗೋಣ. ಸಮಸ್ತ ಜನರಿಗೆ ಭರವಸೆಯ ದಾರಿ ದೀಪವಾದ ಅವರು, ಅವರ ಸಂಪೂರ್ಣ ಬದ್ಧತೆಯ ಜೀವನಕ್ಕಾಗಿ ದೇವರು ಅವರಿಗೆ ಶಾಶ್ವತ ಪ್ರತಿಫಲವನ್ನು ನೀಡಲು, ಮಂಗಳೂರು ಕ್ರೈಸ್ತ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಹಾಗೂ ಭಕ್ತಾದಿಗಳು ನಡೆಸುವ ಶ್ರದ್ಧಾಂಜಲಿ ಸಭೆಗೆ ಪೋಪರ ಸೇವೆ ಸ್ಮರಿಸಿ ಎಲ್ಲರೂ ಹಾಜರಿರಬೇಕೆಂದು ಮಂಗಳೂರು ಧರ್ಮಕ್ಷೇತ್ರದ ಪರವಾಗಿ ವಿನಂತಿಯನ್ನು ಮಾಡಲಾಗಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page