May 11, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಪೋಪ್ ಫ್ರಾನ್ಸಿಸ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆಗೆ ಕರೆ 

ಕಿಸ್ತರ ಶಾಂತಿಯಲ್ಲಿ ವಿಶ್ರಾಂತಿ ಪಡೆದ ಕಥೊಲಿಕ ಕ್ರೈಸ್ತ ಸಮುದಾಯದ ಪರಮಪೂಜ್ಯ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರ ಸ್ಮರಣಾರ್ಥ ಏಪ್ರಿಲ್ 25ರಂದು ಶುಕ್ರವಾರ ಸಂಜೆ 5:00 ಘಂಟೆಗೆ ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಪೋಪ್ ಅವರಿಗಾಗಿ ವಿಶೇಷ ಪ್ರಾರ್ಥನೆ ಹಾಗೂ ಬಲಿಪೂಜೆಯನ್ನು ನಡೆಸಲಾಗುವುದು.

ಬಳಿಕ ಚರ್ಚ್ ಮೈದಾನದಲ್ಲಿ ಶೋಕ ಸಭೆಯು ನಡೆಯಲಿರುವುದು. ಮಂಗಳೂರು ಧರ್ಮಕ್ಷೇತ್ರ ಶೋಕ ವ್ಯಕ್ತಪಡಿಸುವ ಜೊತೆಗೆ ದೇವರ ಶಾಶ್ವತ ವಿಶ್ರಾಂತಿಗೆ ಕರೆಯಲ್ಪಟ್ಟ ಪೋಪ್ ಫ್ರಾನ್ಸಿಸ್ ರವರ ಜೀವನವನ್ನು ಪ್ರೇರಣೆಯಾಗಿ ಮುಂದುವರಿಸಲು ನಾವು ಒಟ್ಟಾಗೋಣ. ಸಮಸ್ತ ಜನರಿಗೆ ಭರವಸೆಯ ದಾರಿ ದೀಪವಾದ ಅವರು, ಅವರ ಸಂಪೂರ್ಣ ಬದ್ಧತೆಯ ಜೀವನಕ್ಕಾಗಿ ದೇವರು ಅವರಿಗೆ ಶಾಶ್ವತ ಪ್ರತಿಫಲವನ್ನು ನೀಡಲು, ಮಂಗಳೂರು ಕ್ರೈಸ್ತ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಹಾಗೂ ಭಕ್ತಾದಿಗಳು ನಡೆಸುವ ಶ್ರದ್ಧಾಂಜಲಿ ಸಭೆಗೆ ಪೋಪರ ಸೇವೆ ಸ್ಮರಿಸಿ ಎಲ್ಲರೂ ಹಾಜರಿರಬೇಕೆಂದು ಮಂಗಳೂರು ಧರ್ಮಕ್ಷೇತ್ರದ ಪರವಾಗಿ ವಿನಂತಿಯನ್ನು ಮಾಡಲಾಗಿದೆ.

You may also like

News

ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಆಯ್ಕೆ

ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾರವರ ಮಾರ್ಗದರ್ಶನದಲ್ಲಿ ನಡೆದ ಚುನಾವಣೆ ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26 ನೇ ಸಾಲಿನ ವಾರ್ಷಿಕ ಚುನಾವಣೆಯು
News

ನಾಳೆ ಮೇ 11ರಂದು ಕಥೊಲಿಕ್ ಸಭಾ ಕೇಂದ್ರೀಯ ವಾರ್ಷಿಕ ಚುನಾವಣೆ

ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಪತ್ರಿಕಾ ಪ್ರಕಟನೆ   ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26 ನೇ ಅವಧಿಗೆ

You cannot copy content of this page